ಮೈಸೂರು ನಗರ

2028ರವರೆಗೂ ಸಿದ್ದರಾಮಯ್ಯ ಗಟ್ಟಿಯಾಗಿರಬೇಕು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಈ ಕುರಿತು ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್ ಸದಸ್ಯ ಡಾ ಕೆ ಶಿವಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈ ಬಾರಿ ಸಿದ್ದರಾಮಯ್ಯ ತಮ್ಮ ಅವಧಿ ಪೊರೈಸಬೇಕು. ಮುಂದಿನ ಅವಧಿಗೂ ಸಿದ್ದರಾಮಯ್ಯ ಇರಬೇಕು ಎಂಬುದಕ್ಕೆ ನಮ್ಮ ತಕರಾರು ಇಲ್ಲ. ‘ಮತ್ತೆ ಮುಖ್ಯಮಂತ್ರಿ’ ಎಂಬ ನಾಟಕವನ್ನು ಸಿಎಂ ಸಿದ್ದರಾಮಯ್ಯ ನೋಡಬೇಕು. ಮತ್ತೆ ಮುಖ್ಯಮಂತ್ರಿ ನಾಟಕದಲ್ಲಿ ಇಡೀ ರಾಜಕೀಯದ ಚಿತ್ರಣವೇ ಇದೆ. ಸಿದ್ದರಾಮಯ್ಯ ಯಾವತ್ತೂ ಹೊಗಳಿಕೆಗೆ ಬೆಲೆ ಕೊಟ್ಟವರಲ್ಲ. ಇದ್ದರೆ ಇರುತ್ತೆ, ಹೋದ್ರೆ ಹೋಗುತ್ತೆ ಬಿಡಿ ಎನ್ನುವ ಮನಸ್ಥಿತಿ ಸಿದ್ದರಾಮಯ್ಯರದು. ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮುಳುಗುತ್ತದೆ. ಸಿದ್ದರಾಮಯ್ಯ ಮುಳುಗಿದರೆ ಅಹಿಂದ ವರ್ಗ ಮುಳುಗುತ್ತದೆ ಎಂದು ಹೇಳಿದರು.

ಇನ್ನು ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರಕಾರ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಷ್ಟು ಜನನಾ ಸಿಎಂ ಸಿಎಂ ಎಂದು ಸುಮ್ಮನೆ ಘೋಷಣೆ ಕೂಗ್ತಿರಾ? ನನ್ನನ್ನು ಸೇರಿದಂತೆ ಎಲ್ಲರನ್ನೂ ಸುಮ್ಮನೆ ಮುಂದಿನ ಸಿಎಂ ಸಿಎಂ ಘೋಷಣೆ ಕೂಗುತ್ತಾರೆ. ದಲಿತ ಸಂಘಟನೆಯ ಮುಖಂಡರು ಬುದ್ದಿವಂತರು. ಸಿದ್ದರಾಮಯ್ಯರೆ ಸಿಎಂ ಆಗಿರಲಿ. ಅವರ ಬದಲಾಗುವುದಾದರೆ ದಲಿತರಿಗೆ ಅವಕಾಶ ಕೊಡಿ ಅಂತಾರೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

55 mins ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

15 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

15 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

15 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

15 hours ago