ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ದಸರಾದ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗದೇ ರಾಜೀನಾಮೆ ಕೊಡಲಿ: ಎನ್‌.ಮಹೇಶ್‌

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಒತ್ತಾಯಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿ ಸರ್ಕಾರ ಮುಗ್ಗರಿಸಿ ಬೀಳುತ್ತಿದೆ. ಇದನ್ನು ತಡೆಯಲು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಿದ್ದ ಅನುದಾನದ ಹಣವನ್ನು ಮೊದಲ ವರ್ಷ ಸುಮಾರು 11,144 ಕೋಟಿ ರೂ. ಹಣವನ್ನ ದುರುಪಯೋಗ ಪಡಿಸಿ ಕೊಂಡಿದೆ. ಈ ವರ್ಷ ಸುಮಾರು 14 ಸಾವಿರ ಕೋಟಿ ಹಣವನ್ನ ಗ್ಯಾರಂಟಿಗೆ ಬಳಸಿದ್ದಾರೆ. ಒಟ್ಟು ಸುಮಾರು 26 ಸಾವಿರ ಕೋಟಿಗಳಷ್ಟು ದುರುಪಯೋಗ ಪಡಿಸಿಕೊಂಡಿದೆ. ಹೀಗಾಗಿ ಎಸ್‌ಸಿ ಮತ್ತು ಎಸ್‌ಟಿಯನ್ನು ಪ್ರತಿನಿಧಿಸುವ 6 ನಿಗಮಗಳು ಗುಟುಕು ನೀರು ಕುಡಿಯುವ ಪರಿಸ್ಥಿತಿ ತಲುಪಿ ಅಭಿವೃದ್ಧಿಗೆ ಹಣವಿಲ್ಲದೆ ಪರದಾಡುವತಂಹ ಮಾಡಿದ್ದಾರೆ ಎಂದು ಆರೋಪಿಸಿದರು.

ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿ ನಾಯಕರಾದ ಮಾಜಿ ಸಚಿವ ಎನ್ ಮಹೇಶ್,ಶಾಸಕ ಶ್ರೀವತ್ಸ, ನಾಗೇಂದ್ರರ ಸಮ್ಮುಖದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯಿತು.ಆರು ನಿಗಮಕ್ಕೆ ಕೇವಲ 510 ಕೋಟಿ ರೂ. ಮಾತ್ರ ನೀಡಿದ್ದಾರೆ. ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂ. ದುರುಪಯೋಗವಾಗಿದೆ. ಇದನ್ನು ಸ್ವತಃ ಸಿದ್ದರಾಮಯ್ಯ ಅವರೇ ಸದನದಲ್ಲಿ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ಈ ನಿಗಮದಿಂದಲೇ 87 ಕೋಟಿ ರೂ. ವಿವಿಧ ಖಾತೆಗಳಿಗೆ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರು ಇದಕ್ಕೂ ನನಗೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಮುಡಾ ಹಗರಣದಲ್ಲೂ ಅದೇ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮುಡಾ ಹಗರಣ ಸಂಬಂಧಿಸಿದಂತೆ ಪ್ರಾರಂಭದಲ್ಲಿ 14 ನಿವೇಶನಗಳನ್ನು ಹಿಂತಿರುಗಿಸಲು ಸಾಧ್ಯವಿಲ್ಲ. ಒಂದು ವೇಳೆ ಹಿಂತಿರುಗಿಸುವುದಾದರೆ ಆ ನಿವೇಶನಗಳ ಬೆಲೆ 62 ಕೋಟಿ ಅಂತ ಹೇಳಿದರು. ಆದರೆ ಇದೀಗ ನಿವೇಶನಗಳನ್ನು ಮುಡಾಗೆ ವಾಪಾಸ್‌ ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎನ್ನುವುದಾದರೆ ಯಾಕೆ ನಿವೇಶನಗಳನ್ನು ವಾಪಾಸ್‌ ಮುಡಾ ವಶಕ್ಕೆ ಕೊಡಬೇಕಿತ್ತು. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಈ ಹಿಂದೆ ಮಾಜಿ ಮುಖ್ಯಂಮತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಬಂದಂತಹ ಇಂತಹದ್ದೇ ಆರೋಪವನ್ನ ಸಿಎಂ ಸಿದ್ದರಾಮಯ್ಯ ಖಂಡಿಸಿದರು ಎಂದು ವಿವರಿಸಿದರು.

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಂದತಂಹ ಪರಿಸ್ಥಿತಿಯೇ ಇಂದು ಸಿದ್ದರಾಮಯ್ಯ ಅವರಿಗೆ ಬಂದಿದೆ. 2011 ರಲ್ಲಿ ಯಡಿಯೂರಪ್ಪ ಅವರು ಅವರ ಮಕ್ಕಳಿಗೆ ಕೊಟ್ಟ ನಿವೇಶನ ವಾಪಸ್ ಕೊಟ್ಟಾಗ ನೀವು ಅವರನ್ನು ನಿಂದಿಸುವ ಕೆಲಸ ಮಾಡಿದ್ದೀರಾ? ಈಗ ಅದೇ ಪರಿಸ್ಥಿತಿಯಲ್ಲಿ ನೀವು ನಿಂತಿದ್ದೀರಿ. ಒಟ್ಟಾರೆ ಒಂದು ವಿಷ ವರ್ತುಲದಲ್ಲಿ ಸಿದ್ದರಾಮಯ್ಯ ಅವರು ಸಿಕ್ಕಿಹಾಕಿಕೊಂಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದ ಹೊಸ ತಿರುವು ಪಡೆದುಕೊಂಡಿದ್ದು, ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಸಿಎಂ ಪತ್ನಿ ನಿವೇಶನ ವಾಪಸ್ ವಶಪಡಿಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಒಂದೇ ದಿನಗಳಲ್ಲಿ ನಿವೇಶನ ವಾಪಸ್ ಮಾಡುವ ಪಕ್ರಿಯೆಯಲ್ಲಿ ಸಿಎಂ ಪುತ್ರ ತೊಡಗಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ದೊಡ್ಡದಾಗಿ ಮಾತನಾಡುವ ಸಿದ್ದರಾಮಯ್ಯ ದಸರಾ ಮಹೋತ್ಸವ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜಿನಾಮೆ ನೀಡಬೇಕು. ರಾಜಿನಾಮೆ ನೀಡಿ ತನಿಖೆ ಎದುರಿಸಬೇಕು. 40 ವರ್ಷಗಳ ನಿಮ್ಮ ನಿಷ್ಕಳಂಕ ರಾಜಕಾರಣ ಮಾಡಿದ್ದೇನೆ ಎನ್ನುವುದಾದರೆ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

8 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

8 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

10 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

12 hours ago