ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ದಾಖಲೆ ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿವಂಗತ ದೇವರಾಜ ಅರಸು ಅವರ ದಾಖಲೆಗೂ ಸಮಾನವಾಗಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಸೇವೆ ಸಲ್ಲಿಸಿದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮದಿಂದ ಆಚರಿಸಿದ ಅಭಿಮಾನಿಗಳು ಹಾಗೂ ಅಹಿಂದ ಮುಖಂಡರು, ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಬಳಿ ನಾಟಿಕೋಳಿ ಬಿರಿಯಾನಿ ವಿತರಣೆ ಮಾಡಿದರು.
ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘಾವಧಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ಅಹಿಂದ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಬಿರಿಯಾನಿ ವಿತರಣೆ ಮಾಡುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದರು.
ಈ ವೇಳೆ “ಸಿದ್ದರಾಮಯ್ಯ ಅವರು ಮುಂದುವರಿದು ಐದು ವರ್ಷಗಳ ಕಾಲವೂ ಮುಖ್ಯಮಂತ್ರಿ ಆಗಿರಲಿ” ಎಂದು ಅಭಿಮಾನಿಗಳು ಘೋಷಣೆ ಕೂಗಿದರು. ಜನಪರ ಆಡಳಿತ, ಹಿಂದುಳಿದ ವರ್ಗಗಳ ಪರ ನಿಲುವು ಮತ್ತು ಸಾಮಾಜಿಕ ನ್ಯಾಯದ ಕಾರ್ಯಕ್ರಮಗಳಿಗಾಗಿ ಸಿದ್ದರಾಮಯ್ಯ ಅವರಿಗೆ ಜನಬೆಂಬಲ ಹೆಚ್ಚಾಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು.
ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ರಾಜ್ಯ ಇನ್ನಷ್ಟು ಅಭಿವೃದ್ಧಿಯ ದಿಕ್ಕಿನಲ್ಲಿ ಸಾಗಲಿ ಎಂಬ ಆಶಯವನ್ನು ಅಭಿಮಾನಿಗಳು ವ್ಯಕ್ತಪಡಿಸಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…