ಮೈಸೂರು ನಗರ

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ರಾಜ್ಯದಲಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಮುಂದಿನ ದಿನಗಳಲ್ಲಿಯೂ ಅವರೇ ಮುಂದುವರೆಯುತ್ತಾರೆ. ಆಯಾಯ ಕಾಲಕ್ಕೆ ತಕ್ಕಂತೆ ರಾಜಕೀಯ ನಿರ್ಧಾರಗಳನ್ನು ನಮ್ಮ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ನಮಗೆ ಹೈಕಮಾಂಡ್ ಇದೆ. ಹೈಕಮಾಂಡ್ ಎಲ್ಲಾ ನಿರ್ಧಾರಗಳನ್ನು ಮಾಡುತ್ತದೆ. ಹೈಕಮಾಂಡ್ ಬಿಟ್ಟು ಉಳಿದವರು ಏನೇ ಮಾತನಾಡಿದರು ಅದರಲ್ಲಿ ಪ್ರಯೋಜನವೂ ಇಲ್ಲ, ಅರ್ಥವೂ ಇಲ್ಲ ಎಂದು ಹೇಳಿದರು.

ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈ ಬಾರಿಯ ದಸರಾ ಮಹೋತ್ಸವ ಬಹಳ ಅಚ್ಚುಕಟ್ಟಾಗಿ ಜರುಗಿತು. ಇದು ಜನರ ದಸರಾ ಆಗಿ ಸಂವಿಧಾನ ಪೀಠಿಕೆ ಮೊದಲ ಸಾಲಿನಂತೆ ಭಾರತೀಯರಾದ ನಾವು ಎನ್ನುವ ಆಶಯದಂತೆ ನೆರವೇರಿತು. 11 ದಿನದಲ್ಲಿ ಒಂದು ಸಾವಿರ ಟನ್ ಕಸ ಸಂಗ್ರಹ ಆಗಿದೆ ಪೌರ ಕಾರ್ಮಿಕರ ಪರಿಶ್ರಮದಿಂದ ಇಡೀ ನಗರ ಸ್ವಚ್ಛವಾಗಿದೆ. ಪೌರಕಾರ್ಮಿಕರಿಗೆ ನನ್ನ ಮೊದಲ ಕೃತಜ್ಞತೆಗಳು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಎಲ್ಲರೂ ತಮ್ಮ ಮನೆಯ ಹಬ್ಬದ ರೀತಿ ದಸರಾ ಮಾಡಿದರು. ಆರಂಭದಲ್ಲಿ ಸ್ವಲ್ಪ ಗೊಂದಲ ಇತ್ತು. ಅದನ್ನೆಲ್ಲಾ ಬಗೆಹರಿಸಿಕೊಂಡು ಯಶಸ್ವಿಯಾಗಿ ದಸರಾ ಮಾಡಿದ್ದೇವೆ. ನಮಗೆ ದಸರಾದಲ್ಲಿ ಯಾವ ರಾಜಕೀಯ ಅಜೆಂಡಾ ಇರಲಿಲ್ಲ. ಈಗಾಗಿ ಆತಂಕವಿಲ್ಲದೆ ದಸರಾ ಮಾಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ:-ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಓಪನ್‌

ಇನ್ನು ಮೊಮ್ಮಗನನ್ನು ತೆರದ ಜೀಪ್‌ನಲ್ಲಿ ಕರೆದುಕೊಂಡು ಹೋಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಲ್ಲಿ ಯಾವ ಪ್ರೋಟೊಕಾಲ್ ಕೂಡ ಉಲ್ಲಂಘನೆಯಾಗಿಲ್ಲ. ಅದು ಪ್ರೋಟೊಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಅದು ಪೆರೇಡ್ ಅಲ್ಲ. ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋದೆವು.
ದಸರಾ ಅಚರಣೆ ಬಗ್ಗೆ ಗೊತ್ತಿಲ್ಲದವರು ಈ ರೀತಿಯ ಸುದ್ದಿ ಹಬ್ಬಿಸುತ್ತಾರೆ ಅಷ್ಟೇ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

1 hour ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

1 hour ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

1 hour ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

1 hour ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago