ಮೈಸೂರು: ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಚಿವ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಇಲ್ಲಿಯವರೆಗೂ ಸಿಎಂ ಬದಲಾವಣೆಯ ಚರ್ಚೆಗಳು ಕೂಡ ನಡೆದಿಲ್ಲ ಎಂದರು.
ಇನ್ನು ಮುಂದೆಯೇ ನಾನು ಸಿಎಂ ಸಿದ್ದರಾಮಯ್ಯ ಜೊತೆ ಸಚಿವನಾಗಿ ಕೆಲಸ ಮಾಡುತ್ತೇನೆ. ವಿಪಕ್ಷ ನಾಯಕರು ಕೂಡ ಪ್ರೀತಿಯಿಂದ ನನ್ನ ಹೆಸರೇಳುತ್ತಾರೆ. ನಮ್ಮಲ್ಲಿ ಯಾವುದೇ ಚರ್ಚೆ, ಬೆಳವಣಿಗೆ ನಡೆದಿಲ್ಲ. ಬೆಂಬಲಿಗರು ಸಿಎಂ ಎಂದು ಜೈಕಾರ ಹಾಕೋದು ಸರ್ವೇ ಸಾಮಾನ್ಯ. ಏನೋ ಬದಲಾವಣೆ ಆಗುತ್ತೆ ಅನ್ನೋದು ಸರಿಯಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸ್ಪಷ್ಟನೆ ನೀಡಿದರು.
ಇನ್ನು ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಮೈಸೂರಿಗೆ ದಸರಾ ನೋಡಲು ಆಗಮಿಸಿದ್ದೇನೆ. ಮೈಸೂರಿನಲ್ಲಿ ಓಡಾಡಿಕೊಂಡು ದಸರಾ ನೋಡಿ ಖುಷಿಪಡುತ್ತೇನೆ.
ಸಚಿವ ಮಹದೇವಪ್ಪ ಭೇಟಿಗೆ ವಿಶೇಷ ಅರ್ಥ ಇಲ್ಲ. ಮಹದೇವಪ್ಪ ಹಾಗೂ ನಮ್ಮ ಮನೆ ಅಕ್ಕ ಪಕ್ಕದಲ್ಲಿದೆ. ಹೀಗಾಗಿ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿ ಮಾತನಾಡಿದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…