Mysore
19
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

Remove term: Siddaramaia̧̧h MLC Yathindra Siddaramaiah clarifies Siddaramaia̧̧h MLC Yathindra Siddaramaiah

ಮೈಸೂರು: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ ಆಗುತ್ತಿರುವುದು ಸುಳ್ಳು. ಅದರ ಬಗ್ಗೆ ಚರ್ಚೆ ಬೇಡ. ಯಾವುದೇ ಕಾರಣಕ್ಕೂ ತಂದೆಯವರು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಡಿ.ಕೆ.ಶಿವಕುಮಾರ್‌ ಸಿಎಂ ಆಗಲಿ ಎಂಬ ರಂಭಾಪುರಿ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಆಗಬೇಕು ಎಂದು ಯಾರೇ ಹೇಳಿಕೆ ಕೊಟ್ಟರೂ ತಪ್ಪಲ್ಲ. ಅದನ್ನು ನಿರ್ಧಾರ ಮಾಡೋದು ಶಾಸಕರು ಮತ್ತು ಹೈಕಮಾಂಡ್. ಹೈಕಮಾಂಡ್ ಏನಾದ್ರೂ ಬದಲಾವಣೆ ಬಗ್ಗೆ ಹೇಳಿದ್ಯಾ? ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಮಾಧ್ಯಮದವರೊಂದಿಗೆ ಮಾತನಾಡಿ ತೆರಳುವ ವೇಳೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರನ್ನು ಸುತ್ತುವರೆದ ಕಾಂಗ್ರೆಸ್‌ ಕಾರ್ಯಕರ್ತರು, ಅಹವಾಲು ಕೊಡಲು ಮುಗಿಬಿದ್ದರು. ಈ ವೇಳೆ ಕಾರ್ಯಕರ್ತರನ್ನು ಸುಮ್ಮನಾಗಿಸಲು ಯತೀಂದ್ರ ಸಿದ್ದರಾಮಯ್ಯ ಸುಸ್ತಾದ ಪ್ರಸಂಗ ನಡೆಯಿತು.

Tags:
error: Content is protected !!