ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಿದ್ದಾರೆ, ಅಸ್ಸಾಂ ಚುನಾವಣೆಯ ವೀಕ್ಷಕರಾಗಿದ್ದಾರೆ. ಹೀಗಾಗಿ ದೆಹಲಿಗೆ ಹೋಗಿದ್ದಾರೆ ಇದಕ್ಕೆ ಯಾವ ವಿಶೇಷ ಅರ್ಥಗಳು ಬೇಡ. ಮುಂದಿನ 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಸುಮ್ಮನೆ ಏನೋ ಆಗುತ್ತದೆ ಎಂದು ಕಾಯುತ್ತಿದ್ದಾರೆ ಬಿಜೆಪಿ ಯಾವಾಗಲೂ ಪರಿಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಇಂತಹ ಸಂಧರ್ಭಗಳನ್ನು ಅವರು ಕಾಯುತ್ತಿರುತ್ತಾರೆ. ನಂತರ ಕೈಗೆ ಸಿಗದ ದ್ರಾಕ್ಷಿ ಹುಳಿ ಎಂದುಕೊಂಡು ಹೋಗುತ್ತಾರೆ. ಇದು ಕೂಡ ಅಷ್ಟೇ ಎಂದು ಹೇಳಿದರು.
ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಅನಧಿಕೃತ ಹೊಂದಾಣಿಕೆಯಲ್ಲಿದ್ದರು. ಈ ಚುನಾವಣೆಯಲ್ಲಿ ಅಧಿಕೃತ ಹೊಂದಾಣಿಕೆಯಲ್ಲಿದ್ದಾರೆ. ಇದರಲ್ಲಿ ಬೇರೆ ವ್ಯತ್ಯಾಸಗಳು ಇಲ್ಲ. ಇದು ಕಾಂಗ್ರೆಸ್ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಎಂದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…