ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಿದ್ದಾರೆ, ಅಸ್ಸಾಂ ಚುನಾವಣೆಯ ವೀಕ್ಷಕರಾಗಿದ್ದಾರೆ. ಹೀಗಾಗಿ ದೆಹಲಿಗೆ ಹೋಗಿದ್ದಾರೆ ಇದಕ್ಕೆ ಯಾವ ವಿಶೇಷ ಅರ್ಥಗಳು ಬೇಡ. ಮುಂದಿನ 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಸುಮ್ಮನೆ ಏನೋ ಆಗುತ್ತದೆ ಎಂದು ಕಾಯುತ್ತಿದ್ದಾರೆ ಬಿಜೆಪಿ ಯಾವಾಗಲೂ ಪರಿಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಇಂತಹ ಸಂಧರ್ಭಗಳನ್ನು ಅವರು ಕಾಯುತ್ತಿರುತ್ತಾರೆ. ನಂತರ ಕೈಗೆ ಸಿಗದ ದ್ರಾಕ್ಷಿ ಹುಳಿ ಎಂದುಕೊಂಡು ಹೋಗುತ್ತಾರೆ. ಇದು ಕೂಡ ಅಷ್ಟೇ ಎಂದು ಹೇಳಿದರು.
ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಲ್ಲಿ ಅನಧಿಕೃತ ಹೊಂದಾಣಿಕೆಯಲ್ಲಿದ್ದರು. ಈ ಚುನಾವಣೆಯಲ್ಲಿ ಅಧಿಕೃತ ಹೊಂದಾಣಿಕೆಯಲ್ಲಿದ್ದಾರೆ. ಇದರಲ್ಲಿ ಬೇರೆ ವ್ಯತ್ಯಾಸಗಳು ಇಲ್ಲ. ಇದು ಕಾಂಗ್ರೆಸ್ ಮೇಲೆ ಯಾವ ಪರಿಣಾಮ ಬೀರುವುದಿಲ್ಲ ಎಂದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…