ಮೈಸೂರು ನಗರ

ರಾಜ್ಯದ ಸಾಲ ಹೆಚ್ಚು ಮಾಡಿದ್ದೇ ಸಿದ್ದರಾಮಯ್ಯ ಸಾಧನೆ: ಮಾಜಿ ಸಚಿವ ಸಾ.ರಾ.ಮಹೇಶ್‌ ವ್ಯಂಗ್ಯ

ಮೈಸೂರು: ತುಪ್ಪದ ಬೆಲೆ ಏರಿಕೆ ಮಾಡಿರುವ ಪರಿಣಾಮ ರೈತರ ಹಾಲಿನ ಪ್ರೋತ್ಸಾಹಧನ ಕೂಡ ಹೆಚ್ಚಳ ಮಾಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಎಸ್‌ಟಿ ಇಳಿಕೆ ಬಳಿಕ ನಂದಿನಿ ತುಪ್ಪದ ಬೆಲೆ ಏರಿಕೆ ಮಾಡಲಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಬಡವರು ಮಧ್ಯಮ ವರ್ಗದವರು ಬದುಕೋದು ಕಷ್ಟ. ಹೀಗಿರುವಾಗ ರೈತರ ಹಾಲಿನ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ನಮ್ಮ ಆಡಳಿತದಲ್ಲಿ ಉತ್ತಮ ಆಡಳಿತ ಕೊಟ್ಟೆದ್ದೇವೆ. ಈಗ ನಿಮ್ಮ ಅವಧಿಯಲ್ಲಿ ಉತ್ತಮ ಆಡಳಿತ ಕೊಡಿ. ಸಿದ್ದರಾಮಯ್ಯರನ್ನ ಅವರ ಹಿಂಬಾಲಕರು ದೇವರಾಜ ಅರಸು ಮೀರಿಸಿದವರು, ಮೈಸೂರು ಮಹಾರಾಜರಿಗಿಂತ ಅಭಿವೃದ್ಧಿ ಮಾಡಿದೋರು ಅಂತಾರೆ. 2ನೇ ಬಾರಿಗೆ ಸಿಎಂ ಆಗಿ ದಾಖಲೆ ಆಗಿದ್ದೀರಾ. ಅದೇ ರೀತಿ ಅತೀ ಹೆಚ್ಚು ರಾಜ್ಯದ ಸಾಲ ಮಾಡಿದ ಕೀರ್ತಿ ನಿಮಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದರು.

ಇದನ್ನು ಓದಿ: ನಂದಿನಿ ತುಪ್ಪ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಅನುಕೂಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಇನ್ನು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದರು. ಮಂಜೂರಾದ ಎಲ್ಲಾ ಹಳ್ಳಿಗಳಿಗೂ ಹೋಗಿ ನಾನು ಭೂಮಿ ಪೂಜೆ ಮಾಡಿದ್ದೆ. ಆ ವೇಳೆ ಚುನಾವಣೆ ನೀತಿಸಂಹಿತೆ ಜಾರಿ ಆಯ್ತು. ಗುದ್ದಲಿಪೂಜೆ ಟೆಂಡರ್ ಆದ ಕಾಮಗಾರಿ ಕ್ಯಾನ್ಸಲ್ ಮಾಡಿ, ಮತ್ತೆ ಅದೇ ಕಾಮಗಾರಿಗೆ ನೀವು ಭೂಮಿಪೂಜೆ ಮಾಡಲು ಹೆಲಿಕಾಪ್ಟರ್‌ನಲ್ಲಿ ಬಂದಿದ್ದು. ಈ ಎಲ್ಲಾ ಕಾಮಗಾರಿಗಳನ್ನ ಲ್ಯಾಂಡ್ ಆರ್ಮಿಗೆ ಯಾಕೆ ಕೊಟ್ರಿ. ಭ್ರಷ್ಟಾಚಾರ ಮುಕ್ತ ಸರ್ಕಾರ ಅಂತ ಹೇಳೋ ನೀವು ಈ ಕಾಮಗಾರಿಯನ್ನು ಯಾಕೆ ಲ್ಯಾಂಡ್ ಆರ್ಮಿಗೆ ಕೊಟ್ಟಿದ್ದು ಹೇಳಿ. ಜನರ ಕಣ್ಣೊರೆಸುವ ತಂತ್ರ ಮಾಡಬೇಡಿ. 2 ಸಾವಿರ ಗೃಹಲಕ್ಷ್ಮಿ ಕೊಡ್ತಿರೋದ್ರಿಂದ ಮಹಿಳೆಯರು ಸುಮ್ಮನಿದ್ದಾರೆ. ಅಧಿಕಾರ ವಿಕೇಂದ್ರಿಕರಣ ಆಗಬೇಕಂದ್ರೆ ಕೂಡಲೇ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಿ ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೃಹತ್ ಮೈಸೂರು ಮಾಡುತ್ತಿರುವುದು ಸಂತೋಷದ ವಿಚಾರ. ಸರ್ಕಾರ ಬಂದು ಎರಡೂವರೆ ವರ್ಷದ ನಂತರ ಬೃಹತ್ ಮೈಸೂರು ಮಾಡಲು ಮುಂದಾಗಿದ್ದಾರೆ. ನಗರ ಪಾಲಿಕೆ ಚುನಾವಣೆ ನಡೆದು ಎರಡು ವರ್ಷ ಕಳೆದಿದೆ. ಜಿಲ್ಲಾ ಪಂಚಾಯತಿಯಲ್ಲಿ 15ನೇ ಹಣಕಾಸು ಆಯೋಗದಿಂದ ಹಣ ಬರುತ್ತಿತ್ತು. ಚುನಾವಣೆ ನಡೆಯದ ಕಾರಣ ಸಾವಿರಾರು ಕೋಟಿ ಬರುವುದು ನಿಂತಿದೆ.

ಇದನ್ನು ಓದಿ: ಜನತೆಗೆ ಬಿಗ್‌ ಶಾಕ್‌ ಕೊಟ್ಟ ಕೆಎಂಎಫ್:‌ ನಂದಿನಿ ತುಪ್ಪದ ದರ 90 ರೂ ಏರಿಕೆ

ಇದರಿಂದ ಹಳ್ಳಿಗಳ ಅಭಿವೃದ್ಧಿಗೆ ಕುಂಠಿತವಾಗಿದೆ. ಮೈಸೂರು ಅಭಿವೃದ್ಧಿಗೆ ಸಾಕಷ್ಟು ಹಣ ಬರುತ್ತಿತ್ತು. ಅದು ಕೂಡ ನಿಂತು ಹೋಗಿದೆ. ಬೃಹತ್ ಮೈಸೂರು ಆದ್ರೆ ಈಗಿರುವ ಮೈಸೂರು ನಗರ ವಿಸ್ತೀರ್ಣಕ್ಕಿಂತ ಹೆಚ್ಚಾಗುತ್ತದೆ. ಇದೆಲ್ಲಾ ಆಗಬೇಕಾದ್ರೆ ಇನ್ನೂ ಎರಡು ವರ್ಷಗಳು ಬೇಕು. ಈ ಮೂಲಕ‌ ನಗರ ಪಾಲಿಕೆ ಚುನಾವಣೆ ನಡೆಯುವುದಿಲ್ಲ. ಬೃಹತ್ ಮೈಸೂರಿಗೆ ಮೊದಲು ಹಣ ಬಿಡುಗಡೆ ಮಾಡಿ. ಬೃಹತ್ ಮೈಸೂರಿಗೆ ಮಾಡಿರುವ ಪ್ಲ್ಯಾನ್‌ನಲ್ಲಿ ಸಾಕಷ್ಟು ಹಳ್ಳಿಗಳನ್ನು ಕೈಬಿಡಲಾಗಿದೆ. ಬೃಹತ್‌ ಮೈಸೂರು ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

4 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

6 hours ago