ಮೈಸೂರು ನಗರ

ರಾಜ್ಯದ ಸಾಲ ಹೆಚ್ಚು ಮಾಡಿದ್ದೇ ಸಿದ್ದರಾಮಯ್ಯ ಸಾಧನೆ: ಮಾಜಿ ಸಚಿವ ಸಾ.ರಾ.ಮಹೇಶ್‌ ವ್ಯಂಗ್ಯ

ಮೈಸೂರು: ತುಪ್ಪದ ಬೆಲೆ ಏರಿಕೆ ಮಾಡಿರುವ ಪರಿಣಾಮ ರೈತರ ಹಾಲಿನ ಪ್ರೋತ್ಸಾಹಧನ ಕೂಡ ಹೆಚ್ಚಳ ಮಾಡಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಎಸ್‌ಟಿ ಇಳಿಕೆ ಬಳಿಕ ನಂದಿನಿ ತುಪ್ಪದ ಬೆಲೆ ಏರಿಕೆ ಮಾಡಲಾಗಿದೆ. ಈಗಿನ ಪರಿಸ್ಥಿತಿಯಲ್ಲಿ ಬಡವರು ಮಧ್ಯಮ ವರ್ಗದವರು ಬದುಕೋದು ಕಷ್ಟ. ಹೀಗಿರುವಾಗ ರೈತರ ಹಾಲಿನ ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ನಮ್ಮ ಆಡಳಿತದಲ್ಲಿ ಉತ್ತಮ ಆಡಳಿತ ಕೊಟ್ಟೆದ್ದೇವೆ. ಈಗ ನಿಮ್ಮ ಅವಧಿಯಲ್ಲಿ ಉತ್ತಮ ಆಡಳಿತ ಕೊಡಿ. ಸಿದ್ದರಾಮಯ್ಯರನ್ನ ಅವರ ಹಿಂಬಾಲಕರು ದೇವರಾಜ ಅರಸು ಮೀರಿಸಿದವರು, ಮೈಸೂರು ಮಹಾರಾಜರಿಗಿಂತ ಅಭಿವೃದ್ಧಿ ಮಾಡಿದೋರು ಅಂತಾರೆ. 2ನೇ ಬಾರಿಗೆ ಸಿಎಂ ಆಗಿ ದಾಖಲೆ ಆಗಿದ್ದೀರಾ. ಅದೇ ರೀತಿ ಅತೀ ಹೆಚ್ಚು ರಾಜ್ಯದ ಸಾಲ ಮಾಡಿದ ಕೀರ್ತಿ ನಿಮಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದರು.

ಇದನ್ನು ಓದಿ: ನಂದಿನಿ ತುಪ್ಪ ದರ ಏರಿಕೆಯಿಂದ ಹಾಲು ಉತ್ಪಾದಕರಿಗೆ ಅನುಕೂಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಇನ್ನು ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದರು. ಮಂಜೂರಾದ ಎಲ್ಲಾ ಹಳ್ಳಿಗಳಿಗೂ ಹೋಗಿ ನಾನು ಭೂಮಿ ಪೂಜೆ ಮಾಡಿದ್ದೆ. ಆ ವೇಳೆ ಚುನಾವಣೆ ನೀತಿಸಂಹಿತೆ ಜಾರಿ ಆಯ್ತು. ಗುದ್ದಲಿಪೂಜೆ ಟೆಂಡರ್ ಆದ ಕಾಮಗಾರಿ ಕ್ಯಾನ್ಸಲ್ ಮಾಡಿ, ಮತ್ತೆ ಅದೇ ಕಾಮಗಾರಿಗೆ ನೀವು ಭೂಮಿಪೂಜೆ ಮಾಡಲು ಹೆಲಿಕಾಪ್ಟರ್‌ನಲ್ಲಿ ಬಂದಿದ್ದು. ಈ ಎಲ್ಲಾ ಕಾಮಗಾರಿಗಳನ್ನ ಲ್ಯಾಂಡ್ ಆರ್ಮಿಗೆ ಯಾಕೆ ಕೊಟ್ರಿ. ಭ್ರಷ್ಟಾಚಾರ ಮುಕ್ತ ಸರ್ಕಾರ ಅಂತ ಹೇಳೋ ನೀವು ಈ ಕಾಮಗಾರಿಯನ್ನು ಯಾಕೆ ಲ್ಯಾಂಡ್ ಆರ್ಮಿಗೆ ಕೊಟ್ಟಿದ್ದು ಹೇಳಿ. ಜನರ ಕಣ್ಣೊರೆಸುವ ತಂತ್ರ ಮಾಡಬೇಡಿ. 2 ಸಾವಿರ ಗೃಹಲಕ್ಷ್ಮಿ ಕೊಡ್ತಿರೋದ್ರಿಂದ ಮಹಿಳೆಯರು ಸುಮ್ಮನಿದ್ದಾರೆ. ಅಧಿಕಾರ ವಿಕೇಂದ್ರಿಕರಣ ಆಗಬೇಕಂದ್ರೆ ಕೂಡಲೇ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಿ ಎಂದು ಆಗ್ರಹಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೃಹತ್ ಮೈಸೂರು ಮಾಡುತ್ತಿರುವುದು ಸಂತೋಷದ ವಿಚಾರ. ಸರ್ಕಾರ ಬಂದು ಎರಡೂವರೆ ವರ್ಷದ ನಂತರ ಬೃಹತ್ ಮೈಸೂರು ಮಾಡಲು ಮುಂದಾಗಿದ್ದಾರೆ. ನಗರ ಪಾಲಿಕೆ ಚುನಾವಣೆ ನಡೆದು ಎರಡು ವರ್ಷ ಕಳೆದಿದೆ. ಜಿಲ್ಲಾ ಪಂಚಾಯತಿಯಲ್ಲಿ 15ನೇ ಹಣಕಾಸು ಆಯೋಗದಿಂದ ಹಣ ಬರುತ್ತಿತ್ತು. ಚುನಾವಣೆ ನಡೆಯದ ಕಾರಣ ಸಾವಿರಾರು ಕೋಟಿ ಬರುವುದು ನಿಂತಿದೆ.

ಇದನ್ನು ಓದಿ: ಜನತೆಗೆ ಬಿಗ್‌ ಶಾಕ್‌ ಕೊಟ್ಟ ಕೆಎಂಎಫ್:‌ ನಂದಿನಿ ತುಪ್ಪದ ದರ 90 ರೂ ಏರಿಕೆ

ಇದರಿಂದ ಹಳ್ಳಿಗಳ ಅಭಿವೃದ್ಧಿಗೆ ಕುಂಠಿತವಾಗಿದೆ. ಮೈಸೂರು ಅಭಿವೃದ್ಧಿಗೆ ಸಾಕಷ್ಟು ಹಣ ಬರುತ್ತಿತ್ತು. ಅದು ಕೂಡ ನಿಂತು ಹೋಗಿದೆ. ಬೃಹತ್ ಮೈಸೂರು ಆದ್ರೆ ಈಗಿರುವ ಮೈಸೂರು ನಗರ ವಿಸ್ತೀರ್ಣಕ್ಕಿಂತ ಹೆಚ್ಚಾಗುತ್ತದೆ. ಇದೆಲ್ಲಾ ಆಗಬೇಕಾದ್ರೆ ಇನ್ನೂ ಎರಡು ವರ್ಷಗಳು ಬೇಕು. ಈ ಮೂಲಕ‌ ನಗರ ಪಾಲಿಕೆ ಚುನಾವಣೆ ನಡೆಯುವುದಿಲ್ಲ. ಬೃಹತ್ ಮೈಸೂರಿಗೆ ಮೊದಲು ಹಣ ಬಿಡುಗಡೆ ಮಾಡಿ. ಬೃಹತ್ ಮೈಸೂರಿಗೆ ಮಾಡಿರುವ ಪ್ಲ್ಯಾನ್‌ನಲ್ಲಿ ಸಾಕಷ್ಟು ಹಳ್ಳಿಗಳನ್ನು ಕೈಬಿಡಲಾಗಿದೆ. ಬೃಹತ್‌ ಮೈಸೂರು ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

2 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

3 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

16 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

16 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

17 hours ago