ಮೈಸೂರು ನಗರ

ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಮುಡಾದಲ್ಲಿ ಬದಲಿ ನಿವೇಶನ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್‌ ಹಂಚಿಕೆ ಮಾಡಿರುವ ವಿಚಾರದಲ್ಲಿ ದೊಡ್ಡ ಅಕ್ರಮವೇ ನಡೆದಿದೆ ಎಂಬ ವಿಚಾರ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಭಾರೀ ಪ್ರಮಾಣದ ಭೂಮಿ ದೊರಕಿರುವ ದಾಖಲೆಗಳು ಸಿಕ್ಕಿದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ ಜಾಗವನ್ನು ೧೯೯೭ ರಲ್ಲಿ ಮೈಸೂರು ಮುಡಾ ವಶಕ್ಕೆ ಪಡೆದು ಆ ಭೂಮಿಗೆ ೨೦೨೧ ರಲ್ಲಿ ಪರಿಹಾರ ಸಹ ಕೊಟ್ಟಿದೆ. ಆದರೂ ಸಹ ಸಿಎಂ ಪತ್ನಿಗೆ ೫೦ : ೫೦ ಅನುಪಾತದಲ್ಲಿ ಪರಿಹಾರ ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

೧೯೯೭ ರ ಆಗಸ್ಟ್‌ ೨೦ ರಂದು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್‌ ೪೬೪ರಲ್ಲಿ ೩.೧೬ ಎಕರೆ ಭೂಮಿ ನೋಟಿಫೈ ಮಾಡಲಾಗಿತ್ತು. ಆ ಕಾಲದಲ್ಲಿ ೩,೨೪,೭೦೦ ರೂ ವೈಯಕ್ತಿಕ ಅವಾರ್ಡ್‌ ನೀಡಲಾಗಿತ್ತು. ಆದರೆ ೨೦೧೪ ರ ಜೂನ್‌ ೨೩ರಲ್ಲಿ ಮುಡಾಗೆ ಬದಲಿ ನಿವೇಶನ ನೀಡುವಂತೆ ಪಾರ್ವತಿ ಪತ್ರ ಬರೆದಿದ್ದರು.  ಈ ಸಂಬಂಧವಾಗಿ ೨೦೧೭ ಡಿಸೆಂಬರ್‌  ೧೫ ಹಾಗೂ ೨೦೧೪ರ ಡಿಸೆಂಬರ್‌ ೩೦ ರಂದು ಅರ್ಜಿದಾರರ ಭೂಮಿಗೆ ಸಮನಾಗಿ ಅಭಿವೃದ್ಧಿ ಪಡಿಸಿದ ಜಮೀನನ್ನು ನೀಡಲು ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಇದಕ್ಕೂ ಒಪ್ಪದ ಸಿಎಂ ಪತ್ನಿ೨೦೨೧ ರ ಅಕ್ಟೋಬರ್‌ ೨೫ ರಂದು ಮುಡಾ ಗೆ ಮತ್ತೆ ಪತ್ರ ಬರೆದು ೫೦;೫೦ ಅನುಪಾತದಲ್ಲಿ ಬದಲಿ ನಿವೇಶನ ನೀಡಲು ಕೋರಿದ್ದಾರೆ. ಇವರ ಕೋರಿಕೆಯಂತೆ ೨೦೨೧ರ ಅಕ್ಟೋಬರ್‌ ೨೯ರಂದು ೫೦ :೫೦ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ೩೮೨೮೪ ಚದರ ಅಡಿ ಅಳತೆಯ ನಿವೇಶನವನ್ನು ಆಯುಕ್ತರು ನೀಡಿದ್ದರು. ಇದರೊಂದಿಗೆ ೧೯೯೭ ರಲ್ಲಿ ಕಳೆದುಕೊಂಡ ಭೂಮಿಗೆ ೨೦೨೧ ರಲ್ಲಿ ಸಿಎಂ ಪತ್ನಿ ಪಾರ್ವತಿಗೆ ಪರಹಾರ ಪಡೆದಿರುವ ದಾಖಲೆಗಳು ಬಯಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

2 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

2 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

2 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

3 hours ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

13 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

13 hours ago