ಮೈಸೂರು ನಗರ

ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಮುಡಾದಲ್ಲಿ ಬದಲಿ ನಿವೇಶನ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್‌ ಹಂಚಿಕೆ ಮಾಡಿರುವ ವಿಚಾರದಲ್ಲಿ ದೊಡ್ಡ ಅಕ್ರಮವೇ ನಡೆದಿದೆ ಎಂಬ ವಿಚಾರ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಭಾರೀ ಪ್ರಮಾಣದ ಭೂಮಿ ದೊರಕಿರುವ ದಾಖಲೆಗಳು ಸಿಕ್ಕಿದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ ಜಾಗವನ್ನು ೧೯೯೭ ರಲ್ಲಿ ಮೈಸೂರು ಮುಡಾ ವಶಕ್ಕೆ ಪಡೆದು ಆ ಭೂಮಿಗೆ ೨೦೨೧ ರಲ್ಲಿ ಪರಿಹಾರ ಸಹ ಕೊಟ್ಟಿದೆ. ಆದರೂ ಸಹ ಸಿಎಂ ಪತ್ನಿಗೆ ೫೦ : ೫೦ ಅನುಪಾತದಲ್ಲಿ ಪರಿಹಾರ ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

೧೯೯೭ ರ ಆಗಸ್ಟ್‌ ೨೦ ರಂದು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್‌ ೪೬೪ರಲ್ಲಿ ೩.೧೬ ಎಕರೆ ಭೂಮಿ ನೋಟಿಫೈ ಮಾಡಲಾಗಿತ್ತು. ಆ ಕಾಲದಲ್ಲಿ ೩,೨೪,೭೦೦ ರೂ ವೈಯಕ್ತಿಕ ಅವಾರ್ಡ್‌ ನೀಡಲಾಗಿತ್ತು. ಆದರೆ ೨೦೧೪ ರ ಜೂನ್‌ ೨೩ರಲ್ಲಿ ಮುಡಾಗೆ ಬದಲಿ ನಿವೇಶನ ನೀಡುವಂತೆ ಪಾರ್ವತಿ ಪತ್ರ ಬರೆದಿದ್ದರು.  ಈ ಸಂಬಂಧವಾಗಿ ೨೦೧೭ ಡಿಸೆಂಬರ್‌  ೧೫ ಹಾಗೂ ೨೦೧೪ರ ಡಿಸೆಂಬರ್‌ ೩೦ ರಂದು ಅರ್ಜಿದಾರರ ಭೂಮಿಗೆ ಸಮನಾಗಿ ಅಭಿವೃದ್ಧಿ ಪಡಿಸಿದ ಜಮೀನನ್ನು ನೀಡಲು ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಇದಕ್ಕೂ ಒಪ್ಪದ ಸಿಎಂ ಪತ್ನಿ೨೦೨೧ ರ ಅಕ್ಟೋಬರ್‌ ೨೫ ರಂದು ಮುಡಾ ಗೆ ಮತ್ತೆ ಪತ್ರ ಬರೆದು ೫೦;೫೦ ಅನುಪಾತದಲ್ಲಿ ಬದಲಿ ನಿವೇಶನ ನೀಡಲು ಕೋರಿದ್ದಾರೆ. ಇವರ ಕೋರಿಕೆಯಂತೆ ೨೦೨೧ರ ಅಕ್ಟೋಬರ್‌ ೨೯ರಂದು ೫೦ :೫೦ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ೩೮೨೮೪ ಚದರ ಅಡಿ ಅಳತೆಯ ನಿವೇಶನವನ್ನು ಆಯುಕ್ತರು ನೀಡಿದ್ದರು. ಇದರೊಂದಿಗೆ ೧೯೯೭ ರಲ್ಲಿ ಕಳೆದುಕೊಂಡ ಭೂಮಿಗೆ ೨೦೨೧ ರಲ್ಲಿ ಸಿಎಂ ಪತ್ನಿ ಪಾರ್ವತಿಗೆ ಪರಹಾರ ಪಡೆದಿರುವ ದಾಖಲೆಗಳು ಬಯಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago