ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಿರುವ ವಿಚಾರದಲ್ಲಿ ದೊಡ್ಡ ಅಕ್ರಮವೇ ನಡೆದಿದೆ ಎಂಬ ವಿಚಾರ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಭಾರೀ ಪ್ರಮಾಣದ ಭೂಮಿ ದೊರಕಿರುವ ದಾಖಲೆಗಳು ಸಿಕ್ಕಿದೆ.
ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ ಜಾಗವನ್ನು ೧೯೯೭ ರಲ್ಲಿ ಮೈಸೂರು ಮುಡಾ ವಶಕ್ಕೆ ಪಡೆದು ಆ ಭೂಮಿಗೆ ೨೦೨೧ ರಲ್ಲಿ ಪರಿಹಾರ ಸಹ ಕೊಟ್ಟಿದೆ. ಆದರೂ ಸಹ ಸಿಎಂ ಪತ್ನಿಗೆ ೫೦ : ೫೦ ಅನುಪಾತದಲ್ಲಿ ಪರಿಹಾರ ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
೧೯೯೭ ರ ಆಗಸ್ಟ್ ೨೦ ರಂದು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್ ೪೬೪ರಲ್ಲಿ ೩.೧೬ ಎಕರೆ ಭೂಮಿ ನೋಟಿಫೈ ಮಾಡಲಾಗಿತ್ತು. ಆ ಕಾಲದಲ್ಲಿ ೩,೨೪,೭೦೦ ರೂ ವೈಯಕ್ತಿಕ ಅವಾರ್ಡ್ ನೀಡಲಾಗಿತ್ತು. ಆದರೆ ೨೦೧೪ ರ ಜೂನ್ ೨೩ರಲ್ಲಿ ಮುಡಾಗೆ ಬದಲಿ ನಿವೇಶನ ನೀಡುವಂತೆ ಪಾರ್ವತಿ ಪತ್ರ ಬರೆದಿದ್ದರು. ಈ ಸಂಬಂಧವಾಗಿ ೨೦೧೭ ಡಿಸೆಂಬರ್ ೧೫ ಹಾಗೂ ೨೦೧೪ರ ಡಿಸೆಂಬರ್ ೩೦ ರಂದು ಅರ್ಜಿದಾರರ ಭೂಮಿಗೆ ಸಮನಾಗಿ ಅಭಿವೃದ್ಧಿ ಪಡಿಸಿದ ಜಮೀನನ್ನು ನೀಡಲು ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಇದಕ್ಕೂ ಒಪ್ಪದ ಸಿಎಂ ಪತ್ನಿ೨೦೨೧ ರ ಅಕ್ಟೋಬರ್ ೨೫ ರಂದು ಮುಡಾ ಗೆ ಮತ್ತೆ ಪತ್ರ ಬರೆದು ೫೦;೫೦ ಅನುಪಾತದಲ್ಲಿ ಬದಲಿ ನಿವೇಶನ ನೀಡಲು ಕೋರಿದ್ದಾರೆ. ಇವರ ಕೋರಿಕೆಯಂತೆ ೨೦೨೧ರ ಅಕ್ಟೋಬರ್ ೨೯ರಂದು ೫೦ :೫೦ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ೩೮೨೮೪ ಚದರ ಅಡಿ ಅಳತೆಯ ನಿವೇಶನವನ್ನು ಆಯುಕ್ತರು ನೀಡಿದ್ದರು. ಇದರೊಂದಿಗೆ ೧೯೯೭ ರಲ್ಲಿ ಕಳೆದುಕೊಂಡ ಭೂಮಿಗೆ ೨೦೨೧ ರಲ್ಲಿ ಸಿಎಂ ಪತ್ನಿ ಪಾರ್ವತಿಗೆ ಪರಹಾರ ಪಡೆದಿರುವ ದಾಖಲೆಗಳು ಬಯಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…