ಮೈಸೂರು ನಗರ

ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಮುಡಾದಲ್ಲಿ ಬದಲಿ ನಿವೇಶನ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ೫೦:೫೦ ಅನುಪಾತದಲ್ಲಿ ಸೈಟ್‌ ಹಂಚಿಕೆ ಮಾಡಿರುವ ವಿಚಾರದಲ್ಲಿ ದೊಡ್ಡ ಅಕ್ರಮವೇ ನಡೆದಿದೆ ಎಂಬ ವಿಚಾರ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೂ ಭಾರೀ ಪ್ರಮಾಣದ ಭೂಮಿ ದೊರಕಿರುವ ದಾಖಲೆಗಳು ಸಿಕ್ಕಿದೆ.

ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿದ್ದ ಜಾಗವನ್ನು ೧೯೯೭ ರಲ್ಲಿ ಮೈಸೂರು ಮುಡಾ ವಶಕ್ಕೆ ಪಡೆದು ಆ ಭೂಮಿಗೆ ೨೦೨೧ ರಲ್ಲಿ ಪರಿಹಾರ ಸಹ ಕೊಟ್ಟಿದೆ. ಆದರೂ ಸಹ ಸಿಎಂ ಪತ್ನಿಗೆ ೫೦ : ೫೦ ಅನುಪಾತದಲ್ಲಿ ಪರಿಹಾರ ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

೧೯೯೭ ರ ಆಗಸ್ಟ್‌ ೨೦ ರಂದು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್‌ ೪೬೪ರಲ್ಲಿ ೩.೧೬ ಎಕರೆ ಭೂಮಿ ನೋಟಿಫೈ ಮಾಡಲಾಗಿತ್ತು. ಆ ಕಾಲದಲ್ಲಿ ೩,೨೪,೭೦೦ ರೂ ವೈಯಕ್ತಿಕ ಅವಾರ್ಡ್‌ ನೀಡಲಾಗಿತ್ತು. ಆದರೆ ೨೦೧೪ ರ ಜೂನ್‌ ೨೩ರಲ್ಲಿ ಮುಡಾಗೆ ಬದಲಿ ನಿವೇಶನ ನೀಡುವಂತೆ ಪಾರ್ವತಿ ಪತ್ರ ಬರೆದಿದ್ದರು.  ಈ ಸಂಬಂಧವಾಗಿ ೨೦೧೭ ಡಿಸೆಂಬರ್‌  ೧೫ ಹಾಗೂ ೨೦೧೪ರ ಡಿಸೆಂಬರ್‌ ೩೦ ರಂದು ಅರ್ಜಿದಾರರ ಭೂಮಿಗೆ ಸಮನಾಗಿ ಅಭಿವೃದ್ಧಿ ಪಡಿಸಿದ ಜಮೀನನ್ನು ನೀಡಲು ಪ್ರಾಧಿಕಾರದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಆದರೆ ಇದಕ್ಕೂ ಒಪ್ಪದ ಸಿಎಂ ಪತ್ನಿ೨೦೨೧ ರ ಅಕ್ಟೋಬರ್‌ ೨೫ ರಂದು ಮುಡಾ ಗೆ ಮತ್ತೆ ಪತ್ರ ಬರೆದು ೫೦;೫೦ ಅನುಪಾತದಲ್ಲಿ ಬದಲಿ ನಿವೇಶನ ನೀಡಲು ಕೋರಿದ್ದಾರೆ. ಇವರ ಕೋರಿಕೆಯಂತೆ ೨೦೨೧ರ ಅಕ್ಟೋಬರ್‌ ೨೯ರಂದು ೫೦ :೫೦ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ೩೮೨೮೪ ಚದರ ಅಡಿ ಅಳತೆಯ ನಿವೇಶನವನ್ನು ಆಯುಕ್ತರು ನೀಡಿದ್ದರು. ಇದರೊಂದಿಗೆ ೧೯೯೭ ರಲ್ಲಿ ಕಳೆದುಕೊಂಡ ಭೂಮಿಗೆ ೨೦೨೧ ರಲ್ಲಿ ಸಿಎಂ ಪತ್ನಿ ಪಾರ್ವತಿಗೆ ಪರಹಾರ ಪಡೆದಿರುವ ದಾಖಲೆಗಳು ಬಯಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago