ಮೈಸೂರು ನಗರ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆ: ಸಚಿವ ಎಚ್‌ಸಿಎಂ ಆರೋಪ

ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ನಿರ್ಮಾಣ ನಮ್ಮ ಮೊದಲ ಅವಧಿಯ ಸರ್ಕಾರದ ಯೋಜನೆ. ಕಳೆದ 2013ರಲ್ಲಿ ನಾವೇ ಈ ಸೇತುವೆ ಯೋಜನೆಗೆ ಕಾರ್ಯಸೂಚಿ ಸಿದ್ಧ ಮಾಡಿದ್ದೆವು. ಒಟ್ಟಾರೆ ಪ್ಲಾನ್ ಕೂಡ ತಯಾರು ಮಾಡಿದ್ದೆವು. ಯಡಿಯೂರಪ್ಪ ಅವರೇ ನನಗೆ ಕರೆ ಮಾಡಿ ಮಹದೇವಣ್ಣ ಈ ಬ್ರಿಡ್ಜ್ ಮಾಡಿಕೊಡು ಎಂದು ಪ್ರೀತಿಯಿಂದ ಹೇಳಿದ್ದರು.

ಅಂದಿನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹ ಮಹದೇವಪ್ಪ ಈ ಬ್ರಿಡ್ಜ್ ಮಾಡು ಎಂದು ಹೇಳಿದ್ದರು. ಹೀಗಾಗಿ ಸೇತುವೆ ಕಾರ್ಯ ಯೋಜನೆ ಮಾಡಿದ್ದೇವೆ. ಯೋಜನೆಗೆ ಹಣ ಜಾಸ್ತಿಯಾದ ಕಾರಣ ಅದನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಾಯಿತು. ನಾನು ಯಾವತ್ತು ಇದು ನಮ್ಮ ಯೋಜನೆ ಎಂದು ಹೇಳಿಕೊಂಡಿಲ್ಲ. ಬಿಜೆಪಿಯವರು ಹೇಳುತ್ತಿರುವುದಕ್ಕೆ ಇಂದು ನಾನು ಹೇಳಿದೆ ಅಷ್ಟೇ. ಇದು ಕಾಂಗ್ರೆಸ್ ಸರ್ಕಾರದ ಯೋಜನೆ ಅನ್ನುವುದರಲ್ಲಿ ಯಾವ ಅನುಮಾನಗಳು ಬೇಡ. ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾಯಕರು ಅಲ್ಲಿ ಇದ್ದಿದ್ದರೇ ಅದರ ಬೆರಗು ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲಿ ಈ ಸಂಘರ್ಷಕ್ಕೆ ಕೇಂದ್ರ ಅವಕಾಶ ಮಾಡಿಕೊಡಬಾರದು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

2 hours ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

2 hours ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

2 hours ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

2 hours ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

3 hours ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

3 hours ago