h c mahadevappa reaction on nikhil kumaraswamy statement
ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ನಿರ್ಮಾಣ ನಮ್ಮ ಮೊದಲ ಅವಧಿಯ ಸರ್ಕಾರದ ಯೋಜನೆ. ಕಳೆದ 2013ರಲ್ಲಿ ನಾವೇ ಈ ಸೇತುವೆ ಯೋಜನೆಗೆ ಕಾರ್ಯಸೂಚಿ ಸಿದ್ಧ ಮಾಡಿದ್ದೆವು. ಒಟ್ಟಾರೆ ಪ್ಲಾನ್ ಕೂಡ ತಯಾರು ಮಾಡಿದ್ದೆವು. ಯಡಿಯೂರಪ್ಪ ಅವರೇ ನನಗೆ ಕರೆ ಮಾಡಿ ಮಹದೇವಣ್ಣ ಈ ಬ್ರಿಡ್ಜ್ ಮಾಡಿಕೊಡು ಎಂದು ಪ್ರೀತಿಯಿಂದ ಹೇಳಿದ್ದರು.
ಅಂದಿನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹ ಮಹದೇವಪ್ಪ ಈ ಬ್ರಿಡ್ಜ್ ಮಾಡು ಎಂದು ಹೇಳಿದ್ದರು. ಹೀಗಾಗಿ ಸೇತುವೆ ಕಾರ್ಯ ಯೋಜನೆ ಮಾಡಿದ್ದೇವೆ. ಯೋಜನೆಗೆ ಹಣ ಜಾಸ್ತಿಯಾದ ಕಾರಣ ಅದನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಾಯಿತು. ನಾನು ಯಾವತ್ತು ಇದು ನಮ್ಮ ಯೋಜನೆ ಎಂದು ಹೇಳಿಕೊಂಡಿಲ್ಲ. ಬಿಜೆಪಿಯವರು ಹೇಳುತ್ತಿರುವುದಕ್ಕೆ ಇಂದು ನಾನು ಹೇಳಿದೆ ಅಷ್ಟೇ. ಇದು ಕಾಂಗ್ರೆಸ್ ಸರ್ಕಾರದ ಯೋಜನೆ ಅನ್ನುವುದರಲ್ಲಿ ಯಾವ ಅನುಮಾನಗಳು ಬೇಡ. ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾಯಕರು ಅಲ್ಲಿ ಇದ್ದಿದ್ದರೇ ಅದರ ಬೆರಗು ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲಿ ಈ ಸಂಘರ್ಷಕ್ಕೆ ಕೇಂದ್ರ ಅವಕಾಶ ಮಾಡಿಕೊಡಬಾರದು ಎಂದು ಸಲಹೆ ನೀಡಿದರು.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…