ಮೈಸೂರು ನಗರ

ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆ: ಸಚಿವ ಎಚ್‌ಸಿಎಂ ಆರೋಪ

ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ನಿರ್ಮಾಣ ನಮ್ಮ ಮೊದಲ ಅವಧಿಯ ಸರ್ಕಾರದ ಯೋಜನೆ. ಕಳೆದ 2013ರಲ್ಲಿ ನಾವೇ ಈ ಸೇತುವೆ ಯೋಜನೆಗೆ ಕಾರ್ಯಸೂಚಿ ಸಿದ್ಧ ಮಾಡಿದ್ದೆವು. ಒಟ್ಟಾರೆ ಪ್ಲಾನ್ ಕೂಡ ತಯಾರು ಮಾಡಿದ್ದೆವು. ಯಡಿಯೂರಪ್ಪ ಅವರೇ ನನಗೆ ಕರೆ ಮಾಡಿ ಮಹದೇವಣ್ಣ ಈ ಬ್ರಿಡ್ಜ್ ಮಾಡಿಕೊಡು ಎಂದು ಪ್ರೀತಿಯಿಂದ ಹೇಳಿದ್ದರು.

ಅಂದಿನ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸಹ ಮಹದೇವಪ್ಪ ಈ ಬ್ರಿಡ್ಜ್ ಮಾಡು ಎಂದು ಹೇಳಿದ್ದರು. ಹೀಗಾಗಿ ಸೇತುವೆ ಕಾರ್ಯ ಯೋಜನೆ ಮಾಡಿದ್ದೇವೆ. ಯೋಜನೆಗೆ ಹಣ ಜಾಸ್ತಿಯಾದ ಕಾರಣ ಅದನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲಾಯಿತು. ನಾನು ಯಾವತ್ತು ಇದು ನಮ್ಮ ಯೋಜನೆ ಎಂದು ಹೇಳಿಕೊಂಡಿಲ್ಲ. ಬಿಜೆಪಿಯವರು ಹೇಳುತ್ತಿರುವುದಕ್ಕೆ ಇಂದು ನಾನು ಹೇಳಿದೆ ಅಷ್ಟೇ. ಇದು ಕಾಂಗ್ರೆಸ್ ಸರ್ಕಾರದ ಯೋಜನೆ ಅನ್ನುವುದರಲ್ಲಿ ಯಾವ ಅನುಮಾನಗಳು ಬೇಡ. ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಾಯಕರು ಅಲ್ಲಿ ಇದ್ದಿದ್ದರೇ ಅದರ ಬೆರಗು ಹೆಚ್ಚಾಗುತ್ತಿತ್ತು. ಮುಂದಿನ ದಿನಗಳಲ್ಲಿ ಈ ಸಂಘರ್ಷಕ್ಕೆ ಕೇಂದ್ರ ಅವಕಾಶ ಮಾಡಿಕೊಡಬಾರದು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

4 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

4 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

4 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

4 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

4 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago