ಮೈಸೂರು ನಗರ

ಸಣ್ಣ ಕೈಗಾರಿಕೆಗಳು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ: ಎಚ್‌ಸಿ ಮಹದೇವಪ್ಪ

ಮೈಸೂರು: ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ನಂತರ ಸುಮಾರು 80 ಸಾವಿರಕ್ಕೂ ಹೆಚ್ಚು ಎಂಎಸ್‌ಎಂಗಳು ಮುಚ್ಚಿ ಹೋಗಿವೆ. ರಾಜ್ಯ ಸರ್ಕಾರ ಈಗ ಮತ್ತೆ ಅವುಗಳ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

ಗ್ರಾಮೀಣಾಭಿವೃದ್ದಿ ಸಚಿವನಾಗಿದ್ದ ಸಂದರ್ಭದಲ್ಲಿ ಮಹಿಳಾ ಉದ್ಯಮಕ್ಕಾಗಿ ಕಡಕೊಳದ ಬಳಿ ಜಮೀನನ್ನು ನೀಡಲಾಗಿತ್ತು. ಮಹಿಳೆಯರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿದರೆ ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ತಿಳಿಸಿದರು.

ಕಾಸಿಯಾ ಅಧ್ಯಕ್ಷರಾದ ಎಂಜಿ ರಾಜಗೋಪಾಲ್‌ ಮಾತನಾಡಿ, ಮಹಿಳೆಯರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ. ಈ ಬಾರಿ ಒಟ್ಟಾರೆ 85 ಮಳಿಗೆಗಳಿದ್ದು, ಮಹಿಳೆಯರಿಂದಲೇ ತಯಾರಿಸಲ್ಪಟ್ಟ ಮಕ್ಕಳ ಆಟಿಕೆಗಳು, ಆಹಾರೊತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಮಹಿಳೆಯರ ಮಳಿಗೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮೂರು ಮಳಿಗೆಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ಭಾಗವಹಿಸಿದ್ದ ಪ್ರತಿಯೊಬ್ಬ ಮಹಿಳೆಯರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾದ್ಯಕ್ಷರಾದ ಡಾ.ಪುಷ್ಪ ಅಮರನಾಥ್‌, ಕಾಸಿಯಾ ಅಧ್ಯಕ್ಷರಾದ ಬಿ.ಆರ್‌.ಗಣೇಶ್‌ ರಾವ್‌, ಜಂಟಿ ಕಾರ್ಯದರ್ಶಿ ಎನ್‌.ಸತೀಶ್‌, ಜೆ.ಎಸ್‌.ಬಾಬು ಸೇರಿದಂತೆ ಇತರರು ಹಾಜರಿದ್ದರು.

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

11 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago