ಮೈಸೂರು ನಗರ

ಸಣ್ಣ ಕೈಗಾರಿಕೆಗಳು ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ: ಎಚ್‌ಸಿ ಮಹದೇವಪ್ಪ

ಮೈಸೂರು: ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ನಂತರ ಸುಮಾರು 80 ಸಾವಿರಕ್ಕೂ ಹೆಚ್ಚು ಎಂಎಸ್‌ಎಂಗಳು ಮುಚ್ಚಿ ಹೋಗಿವೆ. ರಾಜ್ಯ ಸರ್ಕಾರ ಈಗ ಮತ್ತೆ ಅವುಗಳ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.

ಗ್ರಾಮೀಣಾಭಿವೃದ್ದಿ ಸಚಿವನಾಗಿದ್ದ ಸಂದರ್ಭದಲ್ಲಿ ಮಹಿಳಾ ಉದ್ಯಮಕ್ಕಾಗಿ ಕಡಕೊಳದ ಬಳಿ ಜಮೀನನ್ನು ನೀಡಲಾಗಿತ್ತು. ಮಹಿಳೆಯರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿದರೆ ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ತಿಳಿಸಿದರು.

ಕಾಸಿಯಾ ಅಧ್ಯಕ್ಷರಾದ ಎಂಜಿ ರಾಜಗೋಪಾಲ್‌ ಮಾತನಾಡಿ, ಮಹಿಳೆಯರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ. ಈ ಬಾರಿ ಒಟ್ಟಾರೆ 85 ಮಳಿಗೆಗಳಿದ್ದು, ಮಹಿಳೆಯರಿಂದಲೇ ತಯಾರಿಸಲ್ಪಟ್ಟ ಮಕ್ಕಳ ಆಟಿಕೆಗಳು, ಆಹಾರೊತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಮಹಿಳೆಯರ ಮಳಿಗೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮೂರು ಮಳಿಗೆಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ಭಾಗವಹಿಸಿದ್ದ ಪ್ರತಿಯೊಬ್ಬ ಮಹಿಳೆಯರಿಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾದ್ಯಕ್ಷರಾದ ಡಾ.ಪುಷ್ಪ ಅಮರನಾಥ್‌, ಕಾಸಿಯಾ ಅಧ್ಯಕ್ಷರಾದ ಬಿ.ಆರ್‌.ಗಣೇಶ್‌ ರಾವ್‌, ಜಂಟಿ ಕಾರ್ಯದರ್ಶಿ ಎನ್‌.ಸತೀಶ್‌, ಜೆ.ಎಸ್‌.ಬಾಬು ಸೇರಿದಂತೆ ಇತರರು ಹಾಜರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago