ಮೈಸೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆಗೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಆರೋಪಿಸಿದರು. ಎಲ್ಲರೂ ತಮ್ಮ ತಮ್ಮ ರಕ್ಷಣೆಗಾಗಿ ಒಂದು ಕೂಟ ರಚನೆ ಮಾಡಿಕೊಂಡು ನನ್ನ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿದ್ದಾರೆ. ಈಗ ಸಿದ್ದರಾಮಯ್ಯ ಪರ ಮಾತನಾಡಿರುವ ಜಿ.ಟಿ.ದೇವೇಗೌಡ ಕಳೆದ ಮೂರು ತಿಂಗಳಿನಿಂದ ಏನು ಮಾಡ್ತಾ ಇದ್ರು ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮುಡಾದಲ್ಲಿ ಜಿ.ಟಿ.ದೇವೇಗೌಡ ಅವರದ್ದು ಕೂಡ ಅಕ್ರಮವಿರಬಹುದು. ಆ ಕಾರಣಕ್ಕೆ ಈಗ ಎಲ್ಲಾ ನಾಯಕರು ಒಂದಾಗಿದ್ದಾರೆ. ಎಲ್ಲದರ ಬಗ್ಗೆಯೂ ಇ.ಡಿಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ಜಿಟಿಡಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…