ಮೈಸೂರು: ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸಿ, ಜನರ ಮುಂದೆ ಸತ್ಯ ಬಯಲು ಮಾಡುತ್ತೇನೆ ಎಂದು ಸ್ನೇಹಮಯಿ ಕೃಷ್ಣ ಶಪಥ ಮಾಡಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್ಚಿಟ್ ನೀಡಿದ್ದು, ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದೆಂದು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿಯಿರುವಾಗಲೇ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ತನಿಖೆ ಮುಕ್ತಾಯಗೊಳಿಸದೇ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು.
ಇನ್ನು ಲೋಕಾಯುಕ್ತ ಪೊಲೀಸರು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ. ನಾನು ಸಾಕಷ್ಟು ಸಾಕ್ಷಿಗಳನ್ನು ಕೊಟ್ಟಿದ್ದೇನೆ. ಕೋರ್ಟ್ನಲ್ಲಿ ಪ್ರಶ್ನಿಸಿ ಎಂದು ಹೇಳಿದ್ದಾರೆ. ರಾಜ್ಯದ ಜನರಿಗೆ ಅಧಿಕಾರಿಗಳು ವಂಚಿಸುತ್ತಿದ್ದಾರೆ. ರಾಜ್ಯದ ಜನತೆ ಮುಂದೆ ಸತ್ಯ ಸಾಬೀತು ಮಾಡುವೆ. ಸಿಎಂಗೆ ಶಿಕ್ಷೆ ಕೊಡಿಸುವೆ ಎಂದು ಶಪಥ ಮಾಡಿದರು.
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…
ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.…
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…