ಮೈಸೂರು : ಜಾತಿಗಣತಿ ವರದಿ (Caste Census) ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸಲು ಮುಂದಾದರೆ ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.
ಗುರುವಾರ (ಏ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಯೇ ಅನಧಿಕೃತವಾಗಿದೆ. ಆಯೋಗದ ಅಧ್ಯಕ್ಷ ಕಾಂತರಾಜು ವರದಿಗೆ ಸಹಿಯನ್ನೇ ಮಾಡಿಲ್ಲ. ಹೀಗಾಗಿ ಸಹಿ ಇಲ್ಲದ ವರದಿ ಹೇಗೆ ಅಧಿಕೃತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕೆಲವು ದಾಖಲೆಗಳನ್ನು ಅವರೇ ಸಲ್ಲಿಸಿಕೊಂಡು ಅವರಿಗೆ ಬೇಕಾದ ಹಾಗೆ ವರದಿ ಮಾಡಿಕೊಂಡಿದ್ದಾರೆ. ಮನೆ ಮನೆಗೆ ತೆರಳಿ ದತ್ತಾಂಶ ಸಂಗ್ರಹ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಒಂದು ಈ ವೇಳೆ ಜಾತಿ ಗಣತಿ ವರದಿ ಜಾರಿಯಾದರೆ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಇದರ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಇದೀಗ ಈ ಬಗ್ಗೆ ಪತ್ರದ ಮೂಲಕ ಜಯ ಪ್ರಕಾಶ್ ಹೆಗ್ಡೆ ಅವರು ಸ್ಪಷ್ಟನೆ ನೀಡಬೇಕು ಎಂದು ಮನವಿ ಮಾಡಿದ್ದೇನೆ. 15 ದಿನಗಳ ಕಾಲಾವಕಾಶದಲ್ಲಿ ಸ್ಪಷ್ಟನೆ ನೀಡಿದಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು.
ಸ್ಪಷ್ಟನೆ ಸಿಗದಿದ್ದರೆ ಮೊದಲಿಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ದೂರು ದಾಖಲಿಸಿಕೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುತ್ತೇನೆ ಎಂದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…