ಮೈಸೂರು : ಜಾತಿಗಣತಿ ವರದಿ (Caste Census) ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸಲು ಮುಂದಾದರೆ ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.
ಗುರುವಾರ (ಏ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಯೇ ಅನಧಿಕೃತವಾಗಿದೆ. ಆಯೋಗದ ಅಧ್ಯಕ್ಷ ಕಾಂತರಾಜು ವರದಿಗೆ ಸಹಿಯನ್ನೇ ಮಾಡಿಲ್ಲ. ಹೀಗಾಗಿ ಸಹಿ ಇಲ್ಲದ ವರದಿ ಹೇಗೆ ಅಧಿಕೃತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕೆಲವು ದಾಖಲೆಗಳನ್ನು ಅವರೇ ಸಲ್ಲಿಸಿಕೊಂಡು ಅವರಿಗೆ ಬೇಕಾದ ಹಾಗೆ ವರದಿ ಮಾಡಿಕೊಂಡಿದ್ದಾರೆ. ಮನೆ ಮನೆಗೆ ತೆರಳಿ ದತ್ತಾಂಶ ಸಂಗ್ರಹ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಒಂದು ಈ ವೇಳೆ ಜಾತಿ ಗಣತಿ ವರದಿ ಜಾರಿಯಾದರೆ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಇದರ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಇದೀಗ ಈ ಬಗ್ಗೆ ಪತ್ರದ ಮೂಲಕ ಜಯ ಪ್ರಕಾಶ್ ಹೆಗ್ಡೆ ಅವರು ಸ್ಪಷ್ಟನೆ ನೀಡಬೇಕು ಎಂದು ಮನವಿ ಮಾಡಿದ್ದೇನೆ. 15 ದಿನಗಳ ಕಾಲಾವಕಾಶದಲ್ಲಿ ಸ್ಪಷ್ಟನೆ ನೀಡಿದಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು.
ಸ್ಪಷ್ಟನೆ ಸಿಗದಿದ್ದರೆ ಮೊದಲಿಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ದೂರು ದಾಖಲಿಸಿಕೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುತ್ತೇನೆ ಎಂದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…