ಮೈಸೂರು ನಗರ

Caste Census; ಕಾನೂನು ಹೋರಾಟಕ್ಕೆ ಮುಂದಾದ ಸ್ನೇಹಮಯಿ ಕೃಷ್ಣ

ಮೈಸೂರು : ಜಾತಿಗಣತಿ ವರದಿ (Caste Census) ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸಲು ಮುಂದಾದರೆ ಕಾನೂನು ಹೋರಾಟಕ್ಕೆ ಮುಂದಾಗುವುದಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಹೇಳಿದ್ದಾರೆ.

ಗುರುವಾರ (ಏ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಯೇ ಅನಧಿಕೃತವಾಗಿದೆ. ಆಯೋಗದ ಅಧ್ಯಕ್ಷ ಕಾಂತರಾಜು ವರದಿಗೆ ಸಹಿಯನ್ನೇ ಮಾಡಿಲ್ಲ. ಹೀಗಾಗಿ ಸಹಿ ಇಲ್ಲದ ವರದಿ ಹೇಗೆ ಅಧಿಕೃತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಕೆಲವು ದಾಖಲೆಗಳನ್ನು ಅವರೇ ಸಲ್ಲಿಸಿಕೊಂಡು ಅವರಿಗೆ ಬೇಕಾದ ಹಾಗೆ ವರದಿ ಮಾಡಿಕೊಂಡಿದ್ದಾರೆ. ಮನೆ ಮನೆಗೆ ತೆರಳಿ ದತ್ತಾಂಶ ಸಂಗ್ರಹ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಒಂದು ಈ ವೇಳೆ ಜಾತಿ ಗಣತಿ ವರದಿ ಜಾರಿಯಾದರೆ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಇದರ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಇದೀಗ ಈ ಬಗ್ಗೆ ಪತ್ರದ ಮೂಲಕ ಜಯ ಪ್ರಕಾಶ್ ಹೆಗ್ಡೆ ಅವರು ಸ್ಪಷ್ಟನೆ ನೀಡಬೇಕು ಎಂದು ಮನವಿ ಮಾಡಿದ್ದೇನೆ. 15 ದಿನಗಳ ಕಾಲಾವಕಾಶದಲ್ಲಿ ಸ್ಪಷ್ಟನೆ ನೀಡಿದಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು.

ಸ್ಪಷ್ಟನೆ ಸಿಗದಿದ್ದರೆ ಮೊದಲಿಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸುತ್ತೇನೆ. ದೂರು ದಾಖಲಿಸಿಕೊಳ್ಳದಿದ್ದರೆ ಕೋರ್ಟ್ ಮೊರೆ ಹೋಗುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

2 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

2 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

4 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

4 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

6 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

8 hours ago