ಮೈಸೂರು ನಗರ

ಜೆಡಿಎಸ್‌ ಮುಖಂಡ ಪುತ್ರ ಆತ್ಮಹತ್ಯೆ| ಪ್ರತೀಪ್‌ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ: ಸ್ನೇಹಮಯಿ ಕೃಷ್ಣ

ಮೈಸೂರು: ಜೆಡಿಎಸ್‌ ಮುಖಂಡನ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು(ಜನವರಿ.19) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಹೋರಾಟ ನಡೆಸಿ ಶಿಕ್ಷೆ ಕೊಡಿಸಬೇಕಾಗಿದ್ದ ಜಾ.ದಳ ಮುಖಂಡ ಬೆಳವಾಡಿ ಶಿವಮೂರ್ತಿ, ಮಗನ ಸಾವಿಗೆ ಕಾರಣರಾದ ಪೊಲೀಸ್ ಅಧಿಕಾರಿ ಭವ್ಯ ಅವರನ್ನು ರಕ್ಷಣೆ ಮಾಡಲು ಸಹಕರಿಸಿ, ಸೊಸೆ ಮತ್ತು ಮೊಮ್ಮಕ್ಕಳಿಗೆ ಅನ್ಯಾಯ ಮಾಡಿ, ಸುಳ್ಳು ಮರಣಶಾಸನ ಸೃಷ್ಟಿಸಿಕೊಂಡು ಮಗನ ಆಸ್ತಿ ಕಬಳಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೃತ ಪ್ರತೀಪ್‌ ಎಂಬುವವರು ಬೆಳವಾಡಿ ಶಿವಮೂರ್ತಿ ಅವರ ಮಗರಾಗಿದ್ದು, ಅವರಿಗೆ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೂ ಸಹ ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಉಪ ಪೊಲೀಸ್ ನಿರೀಕ್ಷಕಿಯಾಗಿದ್ದ ಭವ್ಯ ಅವರು ಆತನೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಂಡು ಅಪಾರ್ಟ್‌ಮೆಂಟ್‌ನಲ್ಲಿ ವಾಸ ಮಾಡುತ್ತಿದ್ದುದ್ದಲ್ಲದೇ, ಎರಡನೇ ಮದುವೆಯಾಗಲು ಒಪ್ಪಿಗೆ ನೀಡುವಂತೆ ಪ್ರತೀಪ್‌ನ ಮನೆಯವರಿಗೆ ಅದರಲ್ಲೂ ಪ್ರತೀಪ್‌ನ ಪತ್ನಿ ನೇಹಾ ಅವರಿಗೆ ಒತ್ತಡ ಹಾಕಿದ್ದರು. ಆ ವೇಳೆ ಅವರು ಒಪ್ಪದ ಕಾರಣ, ಭವ್ಯ ಅವರು ಮದುವೆಯಾಗಲು ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಹೀಗಾಗಿ ಮಾನಸಿಕ ಒತ್ತಡಕ್ಕೆ ಒಳಗಾದ ಪ್ರತೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರು.

ಮಗನ ಸಾವಿಗೆ ಕಾರಣರಾದ ಭವ್ಯ ಅವರನ್ನು ರಕ್ಷಣೆ ಮಾಡಲು ಶಿವಮೂರ್ತಿ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲದೇ ತಮ್ಮ ಮಗನ ಮೇಲೆ ಬಹಳ ಪ್ರೀತಿ, ಅಭಿಮಾನ ಇದೆ ಎಂಬಂತೆ ನಾಟಕವಾಡಿದ್ದಾರೆ.
ಆತನ ಸಾವಿನಿಂದ ಬಹಳ ನೊಂದಿದ್ದೇನೆ ಎಂಬಂತೆ ಸುಳ್ಳು ಮುಖವಾಡ ಧರಿಸಿ, ಪ್ರತೀಪ್‌ನ ತಾತ್ಕಾಲಿಕ ಪ್ರತಿಮೆ, ಸಮಾಧಿಯನ್ನು ಸ್ಥಾಪಿಸಿ, ಮಗನ ಶಾಶ್ವತ ಪ್ರತಿಮೆ ಮಾಡಲು ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಮುಂಗಡ ಹಣ ನೀಡಿದ್ದ ಬೆಳವಾಡಿ ಶಿವಮೂರ್ತಿ ನಾವೊಬ್ಬ ಗೋಮುಖ ವ್ಯಾಘ್ರ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಇನ್ನೂ ಸ್ವಂತ ಸೊಸೆ ನೇಹಾ ಹಾಗೂ ಮೊಮ್ಮಕ್ಕಳನ್ನು ಮನೆಯಿಂದ ಹೊರ ಹೋಗುವಂತೆ ಮಾಡಿರುವ ಶಿವಮೂರ್ತಿ ಮತ್ತು ಅವರ ಮನೆಯವರು, ಮಗನ ಸಾವಿಗೆ ಕಾರಣರಾದ ಭವ್ಯ ಅವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು, ಆಕೆಯೇ ನಿಜವಾದ ಸೊಸೆ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಭವ್ಯ ಅವರು ಕೂಡ ಮುದುವೆ ಆಗಿದೆ ಎಂಬಂತೆ ತಾಳಿ, ಕಾಲುಂಗರ ಹಾಕಿಕೊಂಡು ಶಿವಮೂರ್ತಿ ಅವರ ಮನೆ ಸೊಸೆ ಎಂಬಂತೆ ಬಿಂಬಿಸಿಕೊಂಡು ಮನೆಯ ಎಲ್ಲಾ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ದೂರಿದರು.

ಈ ಪ್ರಕರಣದ ಸಂಬಂಧ ಶಿವಮೂರ್ತಿ ನೀಡಿರುವ ದೂರು ಅರ್ಜಿ, ನೇಹಾ ಮತ್ತು ಭವ್ಯ ಅವರ ಹೇಳಿಕೆಗಳು, ಮೃತ ಪ್ರತೀಪ್‌ನ ಹೆಸರಲ್ಲಿ ಸೃಷ್ಟಿಸಿಕೊಂಡಿರುವ ಮರಣ ಶಾಸನ ಪತ್ರ, ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ದೂರು ಅರ್ಜಿಗಳನ್ನು ಜನವರಿ 16 ರಂದು ನಗರ ಪೊಲೀಸ್ ಆಯುಕ್ತರಿಗೆ ನೀಡಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಇನ್ನೂ ತನಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡದಂತೆ ತಡೆದಿರುವುದನ್ನು ಗಮನಿಸಿದಾಗ ರಾಜಕೀಯವಾಗಿ ಶಿವಮೂರ್ತಿ ಮತ್ತು ಪೊಲೀಸ್ ಅಧಿಕಾರಿಯಾಗಿ ಭವ್ಯರವರು ಎಷ್ಟು ಪ್ರಭಾವಿಗಳು ಎಂಬುದು ಗೊತ್ತಾಗುತ್ತದೆ. ಏನೇ ಆದರೂ ನೇಹಾ ಮತ್ತು ಅವರ ಮಕ್ಕಳಿಗೆ ನ್ಯಾಯ ಕೊಡಿಸಲು ಸಿದ್ಧರಾಗಿದ್ದೇನೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

41 mins ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

1 hour ago

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

2 hours ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

2 hours ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

3 hours ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

3 hours ago