ಮೈಸೂರು ನಗರ

ಜೆಡಿಎಸ್‌ ಮುಖಂಡ ಪುತ್ರ ಆತ್ಮಹತ್ಯೆ| ಪ್ರತೀಪ್‌ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ: ಸ್ನೇಹಮಯಿ ಕೃಷ್ಣ

ಮೈಸೂರು: ಜೆಡಿಎಸ್‌ ಮುಖಂಡನ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು(ಜನವರಿ.19) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗನ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ಹೋರಾಟ ನಡೆಸಿ ಶಿಕ್ಷೆ ಕೊಡಿಸಬೇಕಾಗಿದ್ದ ಜಾ.ದಳ ಮುಖಂಡ ಬೆಳವಾಡಿ ಶಿವಮೂರ್ತಿ, ಮಗನ ಸಾವಿಗೆ ಕಾರಣರಾದ ಪೊಲೀಸ್ ಅಧಿಕಾರಿ ಭವ್ಯ ಅವರನ್ನು ರಕ್ಷಣೆ ಮಾಡಲು ಸಹಕರಿಸಿ, ಸೊಸೆ ಮತ್ತು ಮೊಮ್ಮಕ್ಕಳಿಗೆ ಅನ್ಯಾಯ ಮಾಡಿ, ಸುಳ್ಳು ಮರಣಶಾಸನ ಸೃಷ್ಟಿಸಿಕೊಂಡು ಮಗನ ಆಸ್ತಿ ಕಬಳಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೃತ ಪ್ರತೀಪ್‌ ಎಂಬುವವರು ಬೆಳವಾಡಿ ಶಿವಮೂರ್ತಿ ಅವರ ಮಗರಾಗಿದ್ದು, ಅವರಿಗೆ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೂ ಸಹ ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಉಪ ಪೊಲೀಸ್ ನಿರೀಕ್ಷಕಿಯಾಗಿದ್ದ ಭವ್ಯ ಅವರು ಆತನೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಂಡು ಅಪಾರ್ಟ್‌ಮೆಂಟ್‌ನಲ್ಲಿ ವಾಸ ಮಾಡುತ್ತಿದ್ದುದ್ದಲ್ಲದೇ, ಎರಡನೇ ಮದುವೆಯಾಗಲು ಒಪ್ಪಿಗೆ ನೀಡುವಂತೆ ಪ್ರತೀಪ್‌ನ ಮನೆಯವರಿಗೆ ಅದರಲ್ಲೂ ಪ್ರತೀಪ್‌ನ ಪತ್ನಿ ನೇಹಾ ಅವರಿಗೆ ಒತ್ತಡ ಹಾಕಿದ್ದರು. ಆ ವೇಳೆ ಅವರು ಒಪ್ಪದ ಕಾರಣ, ಭವ್ಯ ಅವರು ಮದುವೆಯಾಗಲು ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಹೀಗಾಗಿ ಮಾನಸಿಕ ಒತ್ತಡಕ್ಕೆ ಒಳಗಾದ ಪ್ರತೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರು.

ಮಗನ ಸಾವಿಗೆ ಕಾರಣರಾದ ಭವ್ಯ ಅವರನ್ನು ರಕ್ಷಣೆ ಮಾಡಲು ಶಿವಮೂರ್ತಿ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲದೇ ತಮ್ಮ ಮಗನ ಮೇಲೆ ಬಹಳ ಪ್ರೀತಿ, ಅಭಿಮಾನ ಇದೆ ಎಂಬಂತೆ ನಾಟಕವಾಡಿದ್ದಾರೆ.
ಆತನ ಸಾವಿನಿಂದ ಬಹಳ ನೊಂದಿದ್ದೇನೆ ಎಂಬಂತೆ ಸುಳ್ಳು ಮುಖವಾಡ ಧರಿಸಿ, ಪ್ರತೀಪ್‌ನ ತಾತ್ಕಾಲಿಕ ಪ್ರತಿಮೆ, ಸಮಾಧಿಯನ್ನು ಸ್ಥಾಪಿಸಿ, ಮಗನ ಶಾಶ್ವತ ಪ್ರತಿಮೆ ಮಾಡಲು ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ಮುಂಗಡ ಹಣ ನೀಡಿದ್ದ ಬೆಳವಾಡಿ ಶಿವಮೂರ್ತಿ ನಾವೊಬ್ಬ ಗೋಮುಖ ವ್ಯಾಘ್ರ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಇನ್ನೂ ಸ್ವಂತ ಸೊಸೆ ನೇಹಾ ಹಾಗೂ ಮೊಮ್ಮಕ್ಕಳನ್ನು ಮನೆಯಿಂದ ಹೊರ ಹೋಗುವಂತೆ ಮಾಡಿರುವ ಶಿವಮೂರ್ತಿ ಮತ್ತು ಅವರ ಮನೆಯವರು, ಮಗನ ಸಾವಿಗೆ ಕಾರಣರಾದ ಭವ್ಯ ಅವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡು, ಆಕೆಯೇ ನಿಜವಾದ ಸೊಸೆ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಭವ್ಯ ಅವರು ಕೂಡ ಮುದುವೆ ಆಗಿದೆ ಎಂಬಂತೆ ತಾಳಿ, ಕಾಲುಂಗರ ಹಾಕಿಕೊಂಡು ಶಿವಮೂರ್ತಿ ಅವರ ಮನೆ ಸೊಸೆ ಎಂಬಂತೆ ಬಿಂಬಿಸಿಕೊಂಡು ಮನೆಯ ಎಲ್ಲಾ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದು ದೂರಿದರು.

ಈ ಪ್ರಕರಣದ ಸಂಬಂಧ ಶಿವಮೂರ್ತಿ ನೀಡಿರುವ ದೂರು ಅರ್ಜಿ, ನೇಹಾ ಮತ್ತು ಭವ್ಯ ಅವರ ಹೇಳಿಕೆಗಳು, ಮೃತ ಪ್ರತೀಪ್‌ನ ಹೆಸರಲ್ಲಿ ಸೃಷ್ಟಿಸಿಕೊಂಡಿರುವ ಮರಣ ಶಾಸನ ಪತ್ರ, ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಹಾಗೂ ದೂರು ಅರ್ಜಿಗಳನ್ನು ಜನವರಿ 16 ರಂದು ನಗರ ಪೊಲೀಸ್ ಆಯುಕ್ತರಿಗೆ ನೀಡಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಇನ್ನೂ ತನಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡದಂತೆ ತಡೆದಿರುವುದನ್ನು ಗಮನಿಸಿದಾಗ ರಾಜಕೀಯವಾಗಿ ಶಿವಮೂರ್ತಿ ಮತ್ತು ಪೊಲೀಸ್ ಅಧಿಕಾರಿಯಾಗಿ ಭವ್ಯರವರು ಎಷ್ಟು ಪ್ರಭಾವಿಗಳು ಎಂಬುದು ಗೊತ್ತಾಗುತ್ತದೆ. ಏನೇ ಆದರೂ ನೇಹಾ ಮತ್ತು ಅವರ ಮಕ್ಕಳಿಗೆ ನ್ಯಾಯ ಕೊಡಿಸಲು ಸಿದ್ಧರಾಗಿದ್ದೇನೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

10 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

10 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

11 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

11 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

12 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

12 hours ago