ಮೈಸೂರು: ಸೆಪ್ಟೆಂಬರ್.22ರಿಂದ ಅಕ್ಟೋಬರ್.7ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು, ಸಮೀಕ್ಷೆಯು ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತದ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ ಎಂದು ಹೇಳಿದರು.
ಇದನ್ನು ಓದಿ; ವಿಧಾನಪರಿಷತ್ ಸದಸ್ಯರಾಗಿ ನಾಲ್ವರು ಪ್ರಮಾಣ ವಚನ ಸ್ವೀಕಾರ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ. 6 ವರ್ಷ ಮೇಲ್ಪಟ್ಟು ಪಡಿತರ ಚೀಟಿ ಇಲ್ಲದಿರುವ ಮತ್ತು ಪಡಿತರ ಚೀಟಿಯಲ್ಲಿ ಇಲ್ಲದಿರುವ ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್ ಹಾಗೂ ಬಿಸಿಎಂ ಅಧಿಕಾರಿ ರಾಘವೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…