ಮೈಸೂರು ನಗರ

ಸಾಮಾಜಿಕ ಜಾಲತಾಣ ಬಳಕೆ ; ಹೆಣ್ಣು ಮಕ್ಕಳಲ್ಲಿ ಇರಲಿ ಹೆಚ್ಚರ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಚೌಧರಿ ಸಲಹೆ 

ಮೈಸೂರು : ಹೆಣ್ಣು ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಮುನ್ನೆಚ್ಚರಿಕೆಯ ಜೊತೆ ಅಪರಿಚಿತರ ಸ್ನೇಹ ಮಾಡುವ ಬಗ್ಗೆಯೂ ಎಚ್ಚರ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷೀ ಚೌಧರಿ ಹೇಳಿದರು.

ನಗರದ ಹೂಟಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿ-ಕೇರ್ ಸಂಸ್ಥೆ ವತಿಯಿಂದ ನಡೆದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಆವರು ಮಾತನಾಡಿದರು.

ಪ್ರಸ್ತುತ ಹೆಣ್ಣು ಮಕ್ಕಳಿಗೆ ಶಿಕ್ಷಣ ಅಗತ್ಯ. ಮದುವೆಗು ಮುನ್ನ ಶಿಕ್ಷಣ ಪಡೆದು ಉನ್ನತ ಸ್ಥಾನಮಾನ ಅಲಂಕರಿಸಿದರೆ ಯಾರ ಮೇಲು ಅವಲಂಬಿತರಾದಗೆ ಸ್ವಾಲಂಬಿಗಳಾಗಿ ಬದುಕಬಹುದು. ಸರ್ಕಾರಿ ಹಾಗೂ ಕನ್ನಡ ಮಾಧ್ಯಮ ಶಾಲೆ ಎಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿರುವವರು ನಮ್ಮ ನಡುವೆ ಇದ್ದಾರೆ. ಹೀಗಾಗಿ ಮಾಧ್ಯಮ ಹಾಗೂ ಶಾಲೆ ಯಾವುದೇ ಇರಲಿ ಶಿಕ್ಷಿತರಾಗುವುದು ಮುಖ್ಯ ಎಂದು ಅಭಿಪ್ರಾಯಿಸಿದರು.

ಮಕ್ಕಳಿಗೆ ಹೀಗಿನಿಂದಲೇ ಛಲ ಹಾಗೂ ಧೈರ್ಯ ಕಲಿಸಿಕೊಟ್ಟಾಗ ಮಾತ್ರ ಮುಂದೆ ಸಮಸ್ಯೆಗಳನ್ನು ಮೆಟ್ಟಿನಿಂತು ಸಾಧನೆ ಮಾಡಲು ಸಹಾಯವಾಗುವುದು. ಮಕ್ಕಳಿಗೆ ಯಾವುದೇ ಸಮಸ್ಯೆ ಎದುರಾದಲ್ಲಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆಗಳನ್ನು ತಿಳಿಸಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿ.ಕೇರ್ ಸಂಸ್ಥೆಯು ಉತ್ತಮವಾದ ಸೇವೆ ಮಾಡುತ್ತಿದೆ. ಯಾವುದೇ ಸೌಲಭ್ಯಗಳನ್ನು ಪಡೆಯದೇ ವಂಚಿತರಾದ ಮಕ್ಕಳನ್ನು ಗುರುತಿಸಿ ಆವರಿಗೆ ಉತ್ತಮ ಕೌಶಲ್ಯಗಳನ್ನು ನೀಡಿ ಸಮಾಜದಲ್ಲಿ ಉತ್ತಮ ನಾಗರೀಕರಾನ್ನಾಗಿ ಮಾಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಟಿ.ದೇವೆಗೌಡ ಮಾತನಾಡಿ, ತಂದೆ-ತಾಯಿಗಳು ಕುಲಿ ಕೆಲಸ ಮಾಡಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ ಎಂಬ ನಂಬಿಕೆ ಇರುತ್ತದೆ. ಮಕ್ಕಳು ಅವರ ನಂಬಿಕೆಗೆ ಗಾಸಿಗೊಳಿಸದೆ ಸಾಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಮಕ್ಕಳು ಶಿಸ್ತು, ಶಾಂತಿ, ಪ್ರೀತಿ ಇಂತಹ ಕೌಶಲ್ಯಗಳನ್ನು ಆಳವಡಿಸಿಕೊಂಡು ಉತ್ತಮ ಮಾರ್ಗದಲ್ಲಿ ನಡೆಯಬೇಕು. 14 ದಿನಗಳಿಂದ ಶಿಬಿರದಲ್ಲಿ ಕಲಿತ ಕೌಶಲ್ಯಗಳನ್ನು ಆಳವಡಿಸಿಕೊಂಡು ಜೀವನದಲ್ಲಿ ಸಾಧನೆಯ ಕಡೆ ಗಮನ ಹರಿಸಬೇಕು ಎಂದರು.

ಪೋಷಕರು ಮದುವೆಗೆ ಹೆಚ್ಚು ಹಣವನ್ನು ದುಂದು ವೆಚ್ಚ ಮಾಡಿ ಸಾಲಗಾರರಾಗುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಕುವೆಂಪ ಅವರ ಮಂತ್ರ ಮಾಗಲ್ಯವನ್ನು ಅನುಸರಿಸಬೇಕು. ಈ ಮೂಲಕ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದರು.

ನಗರ ಪ್ರದೇಶಗಳಿಗೆ ಸೀಮಿತವಾಗಿರುವ ಬೇಸಿಗೆ ಶಿಬಿರಗಳನ್ನು ಪ್ರತಿ ಹಳ್ಳಿಯಲ್ಲೂ ನಡೆಸಬೇಕು. ಇದರಿಂದ ಹಳ್ಳಿ ಮಕ್ಕಳಿಗೂ ಉತ್ತಮ ವೇದಿಕೆ ಸಿಗಲಿದೆ. ಹೀಗಾಗಿ ಸರ್ಕಾರ ಇಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸುತ್ತೆನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಆದಿವಾಸಿ ಮಕ್ಕಳಿಗೆ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ರಂಗಭೂಮಿ ತಜ್ಷೆ ಡಾ.ರಾಮೇಶ್ವರಿ ವರ್ಮಾ, ಮೈಸೂರು ಗ್ರಾಮಾಂತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಜೆಎಸ್‌ಎಸ್ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಎಂ.ಕಿಶೋರ್, ವಿ-ಕೇರ್ ಸಂಸ್ಥೆಯ ಸಂಸ್ಥಾಪಕ ಡಾ.ಕುಮುದಿನಿ ಅಚ್ಚಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

31 mins ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

46 mins ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

1 hour ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

2 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

2 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

3 hours ago