ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ನಗರದಲ್ಲಿ ಇಂದು ಮಾನತಾಡಿದ ಅವರು, ಚುನಾವಣಾ ಪ್ರಕ್ರಿಯೆ ಕುರಿತು ನಮಗೆ ಅನುಮಾನವಿದೆ. ಅದಕ್ಕೆ ನೀವು ಸ್ಪಷ್ಟನೆ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದರು.
ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ನಡೆದ ಚುನಾವಣೆಗಳಲ್ಲಿ ಮತಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಇದ್ದಕಿದ್ದಂತೆ ಮತಗಳು ಹೆಚ್ಚಾಗಿರುವುದರ ಕುರಿತು ದೇಶದೆಲ್ಲೆಡೆ ಅನುಮಾನ ವ್ಯಕ್ತವಾಗಿದೆ ಎಂದರು.
ಬಿಜೆಪಿ ಸರ್ಕಾರವು ದೇಶಾದಾದ್ಯಂತ ತಮ್ಮ ಪ್ರಾಬಲ್ಯ ಹೊಂದಲು ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜೊತೆಗೆ ಸಿಬಿಐ, ಇಡಿ, ಐಟಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಕೂಡ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಇನ್ನು ಗುತ್ತಿಗೆಯಲ್ಲಿ ರಾಜ್ಯ ಸರ್ಕಾರ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ರಾಜ್ಯ ಸರ್ಕಾರದ ಅಧಿಕಾರ. ಅದನ್ನು ಪ್ರಶ್ನಿಸಬಾರದು. ಇದರ ಕುರಿಅಗಿ ನ್ಯಾಯಾಲಯದ ಮೊರೆ ಹೋಗುವುದಕ್ಕೆ ಬಿಜೆಪಿಗೆ ಅವಕಾಶವಿದೆ ಎಂದು ತಿಳಿಸಿದರು.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…