ಮೈಸೂರು ನಗರ

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

‘ ಗ್ರೇಸ್’ ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ

ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ ಮಕ್ಕಳಿಗಿಂತ ಬದುಕಿನುದ್ದಕ್ಕೂ ಮಗುವಿನ ಮುಗ್ಧತೆಯನ್ನು ಉಳಿಸಿಕೊಳ್ಳುವ ವಿಶೇಷ ಚೇತನ ಮಕ್ಕಳು ಸರ್ವ ಶ್ರೇಷ್ಠರು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯಪಟ್ಟರು.

ಮೈಸೂರಿನ ವಿಶೇಷ ಚೇತನ ಮಕ್ಕಳ ಮುಕ್ತ ಶಾಲೆ ಮತ್ತು ತರಬೇತಿ ಕೇಂದ್ರ ‘ ಗ್ರೇಸ್’ ವತಿಯಿಂದ ನಗರದ ಹೊರಹೊಲಯದ ಗೋಲ್ಡನ್ ರೆಸಾರ್ಟ್ನಲ್ಲಿ ಇಂದು ಆಯೋಜಿಸಿದ್ದ ಪೋಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳ ಇಂದಿನ ಸ್ಥಿತಿಗೆ ಮರುಕ ಪಡೆದೆ ಗರ್ವ ಪಡಬೇಕೆಂದು ತಿಳಿಸಿದರು.

ಅನೇಕ ಬಾರಿ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವಿರುವವರು ದೇಶಕ್ಕೆ, ಸಮಾಜಕ್ಕೆ ಮತ್ತು ಕುಟುಂಬಕ್ಕೆ ಮಾರಕವಾಗಿರುವುದನ್ನು ಕಂಡಿದ್ದೇವೆ. ಆದರೆ, ವಿಶೇಷ ಚೇತನರು ಸಮಾಜಕ್ಕೆ ಕೆಡಕನ್ನು ಬಯಸಿದ್ದಿಲ್ಲ. ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸಿದ ಉದಾಹರಣೆ ಇಲ್ಲ. ಆಸ್ತಿ ಹಣಕ್ಕಾಗಿ ಹೆತ್ತವರ ಉಸಿರು ತೆಗೆದಿಲ್ಲ. ಹೆತ್ತವರಿಗೆ ಕೆಟ್ಟ ಹೆಸರು ತಂದಿಲ್ಲ. ಆದ್ದರಿಂದ ಈ ಮಕ್ಕಳು ಸಮಾಜಕ್ಕೆ ವರದಾನವೇ ವಿನಃ ಶಾಪವಲ್ಲ ಎಂದು ಹೇಳಿದರು.

ಸಮಾಜದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ದುಃಖಿತರೇ. ಆದರೆ, ಒಬ್ಬರಿಗಿಂತ ಒಬ್ಬರ ದುಃಖದಲ್ಲಿ ಭಿನ್ನತೆ ಇರುತ್ತದೆ. ಆದ್ದರಿಂದ ತಾವು ಇರುವುದಲ್ಲೇ ಸಂತೋಷ ಕಂಡುಕೊಳ್ಳಬೇಕು ಎಂದರು.

ಮೈಸೂರು ಡಯೋಸೆಶನ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರೆ. ಫಾ. ಎಡ್ವರ್ಡ್‌ ವಿಲಿಯಂ ಸಲ್ಡಾನಾ ಅವರು ಮಾತನಾಡಿ, ಬದುಕಿನಲ್ಲಿ ಸಂತೋಷವನ್ನು ಹುಡುಕುವುದಲ್ಲ. ಅದು ನಮ್ಮೊಳಗೇ ಇರುತ್ತದೆ. ಶಾಂತಿ ಮತ್ತು ಪ್ರೀತಿ ಎರಡನ್ನೂ ಅನುಸರಿಸಿದರೆ ನಮ್ಮೊಳಗೆ ಸಂತೋಷ ನೆರೆಸುತ್ತದೆ ಎಂದು‌ ತಿಳಿಸಿದರು.

ಮೈಸೂರು ವಿವಿಯ ಕ್ರಿಶ್ಚಿಯಾನಿಟಿ ವಿಭಾಗದ ಮುಖ್ಯಸ್ಥರಾಗದ ರೆ. ಫಾ. ವೆಲಿಂಡಿನ್ ರಾಜೇಂದ್ರ ಕುಮಾರ್ ಅವರು ಕ್ರಿಸ್ ಮಸ್ ಸಂದೇಶ ತಿಳಿಸಿದರು.

ನಂತರ ವಿವಿಧ ವಯೋಮಿತಿಯ ವಿಶೇಷ ಚೇತನ ಮಕ್ಕಳಿಂದ ಮನಕಲಕುವ ನೃತ್ಯ ರೂಪಕಗಳು ಪ್ರದರ್ಶನಗೊಂಡಿತು. ಗ್ರೇಸ್ ಮುಕ್ತ ಶಾಲೆಯ ಪ್ರಾಂಶುಪಲರಾದ ಸ್ವಪ್ನ ಜೋಸೆಫ್, ಟ್ರಸ್ಟಿ ಶಿಬು ಜೋಸೆಫ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

7 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

8 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

8 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

9 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

10 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

10 hours ago