ಮೈಸೂರು ನಗರ

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

‘ ಗ್ರೇಸ್’ ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ

ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ ಮಕ್ಕಳಿಗಿಂತ ಬದುಕಿನುದ್ದಕ್ಕೂ ಮಗುವಿನ ಮುಗ್ಧತೆಯನ್ನು ಉಳಿಸಿಕೊಳ್ಳುವ ವಿಶೇಷ ಚೇತನ ಮಕ್ಕಳು ಸರ್ವ ಶ್ರೇಷ್ಠರು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಅಭಿಪ್ರಾಯಪಟ್ಟರು.

ಮೈಸೂರಿನ ವಿಶೇಷ ಚೇತನ ಮಕ್ಕಳ ಮುಕ್ತ ಶಾಲೆ ಮತ್ತು ತರಬೇತಿ ಕೇಂದ್ರ ‘ ಗ್ರೇಸ್’ ವತಿಯಿಂದ ನಗರದ ಹೊರಹೊಲಯದ ಗೋಲ್ಡನ್ ರೆಸಾರ್ಟ್ನಲ್ಲಿ ಇಂದು ಆಯೋಜಿಸಿದ್ದ ಪೋಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳ ಇಂದಿನ ಸ್ಥಿತಿಗೆ ಮರುಕ ಪಡೆದೆ ಗರ್ವ ಪಡಬೇಕೆಂದು ತಿಳಿಸಿದರು.

ಅನೇಕ ಬಾರಿ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯವಿರುವವರು ದೇಶಕ್ಕೆ, ಸಮಾಜಕ್ಕೆ ಮತ್ತು ಕುಟುಂಬಕ್ಕೆ ಮಾರಕವಾಗಿರುವುದನ್ನು ಕಂಡಿದ್ದೇವೆ. ಆದರೆ, ವಿಶೇಷ ಚೇತನರು ಸಮಾಜಕ್ಕೆ ಕೆಡಕನ್ನು ಬಯಸಿದ್ದಿಲ್ಲ. ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸಿದ ಉದಾಹರಣೆ ಇಲ್ಲ. ಆಸ್ತಿ ಹಣಕ್ಕಾಗಿ ಹೆತ್ತವರ ಉಸಿರು ತೆಗೆದಿಲ್ಲ. ಹೆತ್ತವರಿಗೆ ಕೆಟ್ಟ ಹೆಸರು ತಂದಿಲ್ಲ. ಆದ್ದರಿಂದ ಈ ಮಕ್ಕಳು ಸಮಾಜಕ್ಕೆ ವರದಾನವೇ ವಿನಃ ಶಾಪವಲ್ಲ ಎಂದು ಹೇಳಿದರು.

ಸಮಾಜದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ದುಃಖಿತರೇ. ಆದರೆ, ಒಬ್ಬರಿಗಿಂತ ಒಬ್ಬರ ದುಃಖದಲ್ಲಿ ಭಿನ್ನತೆ ಇರುತ್ತದೆ. ಆದ್ದರಿಂದ ತಾವು ಇರುವುದಲ್ಲೇ ಸಂತೋಷ ಕಂಡುಕೊಳ್ಳಬೇಕು ಎಂದರು.

ಮೈಸೂರು ಡಯೋಸೆಶನ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರೆ. ಫಾ. ಎಡ್ವರ್ಡ್‌ ವಿಲಿಯಂ ಸಲ್ಡಾನಾ ಅವರು ಮಾತನಾಡಿ, ಬದುಕಿನಲ್ಲಿ ಸಂತೋಷವನ್ನು ಹುಡುಕುವುದಲ್ಲ. ಅದು ನಮ್ಮೊಳಗೇ ಇರುತ್ತದೆ. ಶಾಂತಿ ಮತ್ತು ಪ್ರೀತಿ ಎರಡನ್ನೂ ಅನುಸರಿಸಿದರೆ ನಮ್ಮೊಳಗೆ ಸಂತೋಷ ನೆರೆಸುತ್ತದೆ ಎಂದು‌ ತಿಳಿಸಿದರು.

ಮೈಸೂರು ವಿವಿಯ ಕ್ರಿಶ್ಚಿಯಾನಿಟಿ ವಿಭಾಗದ ಮುಖ್ಯಸ್ಥರಾಗದ ರೆ. ಫಾ. ವೆಲಿಂಡಿನ್ ರಾಜೇಂದ್ರ ಕುಮಾರ್ ಅವರು ಕ್ರಿಸ್ ಮಸ್ ಸಂದೇಶ ತಿಳಿಸಿದರು.

ನಂತರ ವಿವಿಧ ವಯೋಮಿತಿಯ ವಿಶೇಷ ಚೇತನ ಮಕ್ಕಳಿಂದ ಮನಕಲಕುವ ನೃತ್ಯ ರೂಪಕಗಳು ಪ್ರದರ್ಶನಗೊಂಡಿತು. ಗ್ರೇಸ್ ಮುಕ್ತ ಶಾಲೆಯ ಪ್ರಾಂಶುಪಲರಾದ ಸ್ವಪ್ನ ಜೋಸೆಫ್, ಟ್ರಸ್ಟಿ ಶಿಬು ಜೋಸೆಫ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

38 mins ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

3 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

5 hours ago