ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ ಅದ್ಧೂರಿಯಾಗಿ ಜರುಗಿತು.
ತುಂತುರು ಮಳೆಯ ನಡುವೆ ಸಮುದಾಯದ ಮುಖಂಡರು, ಯುವಕರು ಹಾಗೂ ಮಹಿಳೆಯರು ರಾಘವೇಂದ್ರ ನಗರದಲ್ಲಿರುವ ಮಾರಮ್ಮನ ದೇವಾಲಯಕ್ಕೆ ತೆರಳಿ ವಾದ್ಯಗೋಷ್ಠಿ ಸಮೇತ ಮೆರವಣಿಗೆ ಮೂಲಕ ದೇವಿಯ ಮೂರ್ತಿಗಳನ್ನು ಹೊತ್ತು ತಂದರು.
ಮೆರವಣಿಗೆ ಉದ್ದಕ್ಕೂ ಸಮುದಾಯದ ಯುವಕರು, ಮಹಿಳೆಯರು ಮತ್ತು ಮಕ್ಕಳು ವಾದ್ಯಗೋಷ್ಠಿಗೆ ತಕ್ಕಂತೆ ನರ್ತಿಸಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಮಂಜುನಾಥ್ ಲಾಲೆ ಮಾತನಾಡಿ, ಕಳೆದ 24 ವರ್ಷದಿಂದ ನಾವು ಚಾಮುಂಡೇಶ್ವರಿ ಉತ್ಸವ ನಡೆಸುತ್ತಿದ್ದೇವೆ. ಮೈಸೂರಿನಲ್ಲಿರುವ ಭಾವಸಾರ ಕ್ಷತ್ರಿಯ ಸಮುದಾಯದ ಎಲ್ಲಾ ಮುಖಂಡರು ಮತ್ತು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
ಮೊದಲ ದಿನ ದೇವಿಯ ಪ್ರತಿಷ್ಠಾಪನೆ, ಎರಡನೇ ದಿನ ಮಕ್ಕಳಿಗೆ ರಂಗೋಲಿ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಫ್ಯಾಷನ್ ಶೋ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಮಕ್ಕಳಿಗೆ ಬಹುಮಾನ ನೀಡಲಾಗುವುದು.
ಮೂರನೇ ದಿನ ಮಹಾಮಂಗಳಾರತಿ ಬಳಿಕ ಅನ್ನಸಂತರ್ಪಣೆ ನಡೆಸಲಾಗುವುದು. ಬಳಿಕ ಪ್ರತಿಷ್ಠಾಪಿಸಿದ ಮೂರ್ತಿಗಳನ್ನು ತ್ರಿವೇಣಿ ವೃತ್ತದ ಮೂಲಕ ಶ್ರೀರಂಗಪಟ್ಟಣದಲ್ಲಿರುವ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…
ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…
ಮೈಸೂರು ನಗರದ ಪ್ರತಿಯೊಂದೂ ವಾರ್ಡ್ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್ನ್ನು ಪ್ರತಿನಿಧಿಸುವ ಪಾಲಿಕೆ…