ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ ಅದ್ಧೂರಿಯಾಗಿ ಜರುಗಿತು.
ತುಂತುರು ಮಳೆಯ ನಡುವೆ ಸಮುದಾಯದ ಮುಖಂಡರು, ಯುವಕರು ಹಾಗೂ ಮಹಿಳೆಯರು ರಾಘವೇಂದ್ರ ನಗರದಲ್ಲಿರುವ ಮಾರಮ್ಮನ ದೇವಾಲಯಕ್ಕೆ ತೆರಳಿ ವಾದ್ಯಗೋಷ್ಠಿ ಸಮೇತ ಮೆರವಣಿಗೆ ಮೂಲಕ ದೇವಿಯ ಮೂರ್ತಿಗಳನ್ನು ಹೊತ್ತು ತಂದರು.
ಮೆರವಣಿಗೆ ಉದ್ದಕ್ಕೂ ಸಮುದಾಯದ ಯುವಕರು, ಮಹಿಳೆಯರು ಮತ್ತು ಮಕ್ಕಳು ವಾದ್ಯಗೋಷ್ಠಿಗೆ ತಕ್ಕಂತೆ ನರ್ತಿಸಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ಮಂಜುನಾಥ್ ಲಾಲೆ ಮಾತನಾಡಿ, ಕಳೆದ 24 ವರ್ಷದಿಂದ ನಾವು ಚಾಮುಂಡೇಶ್ವರಿ ಉತ್ಸವ ನಡೆಸುತ್ತಿದ್ದೇವೆ. ಮೈಸೂರಿನಲ್ಲಿರುವ ಭಾವಸಾರ ಕ್ಷತ್ರಿಯ ಸಮುದಾಯದ ಎಲ್ಲಾ ಮುಖಂಡರು ಮತ್ತು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
ಮೊದಲ ದಿನ ದೇವಿಯ ಪ್ರತಿಷ್ಠಾಪನೆ, ಎರಡನೇ ದಿನ ಮಕ್ಕಳಿಗೆ ರಂಗೋಲಿ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಫ್ಯಾಷನ್ ಶೋ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಮಕ್ಕಳಿಗೆ ಬಹುಮಾನ ನೀಡಲಾಗುವುದು.
ಮೂರನೇ ದಿನ ಮಹಾಮಂಗಳಾರತಿ ಬಳಿಕ ಅನ್ನಸಂತರ್ಪಣೆ ನಡೆಸಲಾಗುವುದು. ಬಳಿಕ ಪ್ರತಿಷ್ಠಾಪಿಸಿದ ಮೂರ್ತಿಗಳನ್ನು ತ್ರಿವೇಣಿ ವೃತ್ತದ ಮೂಲಕ ಶ್ರೀರಂಗಪಟ್ಟಣದಲ್ಲಿರುವ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…