ಮೈಸೂರು ನಗರ

ಕಾಲ್ತುಳಿತ ದುರಂತ ಪ್ರಕರಣವನ್ನು ಸಿಬಿಐಗೆ ವಹಿಸಿ: ಸ್ನೇಹಮಯಿ ಕೃಷ್ಣ ಆಗ್ರಹ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿ, ದಾಖಲೆಗಳ ಸಮೇತ ಮನವಿ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಅವರು, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ 11 ಜನರ ಸಾವಿನ ಸಂಬಂಧ ಈ ಹಿಂದೆ ಅಂದರೆ 05.06.2025 ಮತ್ತು 06.06.2025 ರಂದು ನಾನು ನೀಡಿದ ದೂರರ್ಜಿಗೆ ಪೂರಕವಾಗಿ ಮತ್ತಷ್ಟು ಮಾಹಿತಿ ಮತ್ತು ದಾಖಲಾತಿಗಳನ್ನು ನೀಡುತ್ತಿದ್ದೇನೆ.

ಸದರಿ ಕೃತ್ಯಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ತಾವು ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ದಾವೆಯಲ್ಲಿ ನನ್ನ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಅಳವಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸದರಿ ಕಾಲ್ತುಳಿತ ಕೃತ್ಯದಿಂದ ಆದ 11 ಜನರ ಸಾವಿಗೆ ಪ್ರಮುಖ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್‌ರನ್ನು ಆರೋಪಿಯನ್ನಾಗಿಸಿ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 123/2025 ಸಂಖ್ಯೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

18 mins ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

6 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

7 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

7 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

7 hours ago