BJP Protest
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ತೊಲಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್.ನಾಗೇಂದ್ರ ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಭಾಗಿಯಾಗಿದ್ದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…