ಮೈಸೂರು ನಗರ

ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ: ಸಿಎಂ ಸಿದ್ದರಾಮಯ್ಯ

ಮೈಸೂರು: ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಪ್ರಜೆಗಳು ಅನೇಕ ಬಾರಿ ಒದಗಿಸಿಕೊಟ್ಟಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ರಾಜಕೀಯದಲ್ಲಿ ದೀರ್ಘಕಾಲದಿಂದ ಇರಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ರಾಜ್ಯದ ಜನರಿಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಬಳಿಕ ನಾಳೆ ವಿಜಯದಶಮಿ ದಿನದ ಪ್ರಯುಕ್ತ ವಿಶ್ವ ವಿಖ್ಯಾತ ಜಂಬೂಸವಾರಿ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ರಾಜಕಾರಣದಲ್ಲಿ ಹೊಗಳುವವರು ಮತ್ತು ತೆಗಳುವವರು ಇಬ್ಬರೂ ಇದ್ದೇ ಇರುತ್ತಾರೆ. ಇದರಂತೆಯೇ ಅಭಿಮಾನಿಗಳು ಹಾಗೂ ಶತ್ರುಗಳು ಸಹ ಇರುತ್ತಾರೆ. ನಾನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇನೆ. ಹೀಗಾಗಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ಇದ್ದಾಗ ಮಾತ್ರ ಅದು ಯಶಸ್ವಿಯಾಗುತ್ತದೆ ಎಂದು ಹೇಳಿದರು.

ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಸರ್ಕಾರದ ಜಾಹೀರಾತಿನ ಬಗ್ಗೆ ಪ್ರತಿಕ್ರಿಯೆ ನೀಡಿ, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷೆಯನ್ನು ದಸರಾ ಹಬ್ಬದ ಪ್ರತೀಕವಾಗಿದೆ.

ವಿಜಯನಗರ ಅರಸರ ಜಯದ ಸಂಕೇತವಾಗಿ ಆರಂಭಿಸಲಾದ ಆಯುಧಪೂಜೆ ದಸರಾ ಉತ್ಸವವನ್ನು ಮೈಸೂರು ಒಡೆಯರ್ ರವರು ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಅವರು ದುಷ್ಟರ ಸಂಹಾರ ಆಗಬೇಕಿದೆ ಎಂದು ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು ಈ ರೀತಿ ಸುಳ್ಳು ಮಾತನಾಡುವುದು ತಪ್ಪು. ಕೋರ್ಟ್‌ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದರು.

 

ಆಂದೋಲನ ಡೆಸ್ಕ್

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

29 mins ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

34 mins ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

36 mins ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

38 mins ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

40 mins ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

12 hours ago