ಮೈಸೂರು: ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಪ್ರಜೆಗಳು ಅನೇಕ ಬಾರಿ ಒದಗಿಸಿಕೊಟ್ಟಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ರಾಜಕೀಯದಲ್ಲಿ ದೀರ್ಘಕಾಲದಿಂದ ಇರಲು ಸಾಧ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ರಾಜ್ಯದ ಜನರಿಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಬಳಿಕ ನಾಳೆ ವಿಜಯದಶಮಿ ದಿನದ ಪ್ರಯುಕ್ತ ವಿಶ್ವ ವಿಖ್ಯಾತ ಜಂಬೂಸವಾರಿ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ರಾಜಕಾರಣದಲ್ಲಿ ಹೊಗಳುವವರು ಮತ್ತು ತೆಗಳುವವರು ಇಬ್ಬರೂ ಇದ್ದೇ ಇರುತ್ತಾರೆ. ಇದರಂತೆಯೇ ಅಭಿಮಾನಿಗಳು ಹಾಗೂ ಶತ್ರುಗಳು ಸಹ ಇರುತ್ತಾರೆ. ನಾನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇನೆ. ಹೀಗಾಗಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ಇದ್ದಾಗ ಮಾತ್ರ ಅದು ಯಶಸ್ವಿಯಾಗುತ್ತದೆ ಎಂದು ಹೇಳಿದರು.
ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ಸರ್ಕಾರದ ಜಾಹೀರಾತಿನ ಬಗ್ಗೆ ಪ್ರತಿಕ್ರಿಯೆ ನೀಡಿ, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷೆಯನ್ನು ದಸರಾ ಹಬ್ಬದ ಪ್ರತೀಕವಾಗಿದೆ.
ವಿಜಯನಗರ ಅರಸರ ಜಯದ ಸಂಕೇತವಾಗಿ ಆರಂಭಿಸಲಾದ ಆಯುಧಪೂಜೆ ದಸರಾ ಉತ್ಸವವನ್ನು ಮೈಸೂರು ಒಡೆಯರ್ ರವರು ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಅವರು ದುಷ್ಟರ ಸಂಹಾರ ಆಗಬೇಕಿದೆ ಎಂದು ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು ಈ ರೀತಿ ಸುಳ್ಳು ಮಾತನಾಡುವುದು ತಪ್ಪು. ಕೋರ್ಟ್ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದರು.
ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…