State BJP president's name to be announced within 10 days L Nagendra
ಮೈಸೂರು: ಇನ್ನು 10 ದಿನದೊಳಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆಯಾಗಲಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷರಾಗಿರುವ ವಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಹಲವು ನಾಯಕರು ಆಗಾಗ ಧ್ವನಿ ಎತ್ತುತ್ತಲೇ ಬಂದಿದ್ದಾರೆ. ಮುಖ್ಯವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಸೇರಿದಂತೆ ಹಲವು ನಾಯಕರು ವಿಜಯೇಂದ್ರ ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಬೇಡ ಎಂದು ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಗಳ ಅಧ್ಯಕ್ಷರ ಹೆಸರನ್ನು ಇನ್ನು ಕೆಲವೇ ದಿನಗಳಲ್ಲಿ ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಶಾಸಕ ಹಾಗೂ ಬಿಜೆಪಿ ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ ಅವರು, ಇನ್ನು 10 ದಿನದೊಳಗೆ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನು ದಾವಣಗೆರೆಯಲ್ಲಿ ಬಿಜೆಪಿ ರೆಬೆಲ್ಸ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಯಾವುದೇ ಭಿನ್ನಮತದ ಸಭೆ ನಡೆಸಿಲ್ಲ. ಮಾಜಿ ಸಂಸದರ ಜನ್ಮದಿನದ ಆಚರಣೆ ಮಾಡ್ತಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…