ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್ ಕಟ್ ಅಂಡ್ ಪೇಸ್ಟ್ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ರಾಹುಕಾಲ ಅಂತ ಮೂರು ನಿಮಿಷ ಮುಂಚಿತವಾಗಿ ಆರಂಭಿಸಿದ್ದರು. ವರ್ಷದಿಂದ ವರ್ಷಕ್ಕೆ ಪುಸ್ತಕದ ಬಜೆಟ್ ಪ್ರತಿ ದಪ್ಪವಾಗುತ್ತಿದೆ. ಆದರೆ ಬಜೆಟ್ನಲ್ಲಿ ಹೇಳುವುದು ಒಂದು, ಮಾಡೋದು ಇನ್ನೊಂದು. ೩.೭೦ ಲಕ್ಷ ಕೋಟಿಯಲ್ಲಿ ಇದುವರೆಗೂ ಯಾವ ಅಭಿವೃದ್ಧಿ ಆಯಿತು ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಖಜಾನೆಯಲ್ಲಿ ಸ್ವಲ್ಪವೂ ದುಡ್ಡಿಲ್ಲ. ಈ ಹಿನ್ನೆಲೆಯಲ್ಲಿ ನೀವು ಯಾರನ್ನೂ ಮೂರ್ಖರನ್ನಾಗಿ ಮಾಡಲು ಹೊರಟಿದ್ದೀರಾ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಹದಿನಾರು ಬಜೆಟ್ ಮಂಡಿಸಿದ್ದಾರೆಯೇ ಹೊರತು ಯಾವ ಬದಲಾವಣೆ ಹಾಗೂ ಸುಧಾರಣೆ ತಂದಿಲ್ಲ. ಇದೊಂದು ಕಟ್ ಅಂಡ್ ಪೇಸ್ಟ್ ಆಗಿದೆ ಎಂದು ಬಜೆಟ್ ವಿರುದ್ಧ ಕಿಡಿಕಾರಿದರು.
ಇನ್ನು ಬಜೆಟ್ನಲ್ಲಿ ನೀವು ಮೈಸೂರಿಗೆ ಏನು ಕೊಟ್ಟಿದ್ದೀರಿ. ಹಳೆಯದನ್ನೇ ಹೇಳ್ತಾ ಇದ್ದೀರಿ. ಈಗಾಗಲೇ ನಿಮ್ಹಾನ್ಸ್ ಕೆಲಸ ಶುರುವಾಗಿದೆ. ಚಿತ್ರನಗರಿ ಎಂದು ಎಷ್ಟು ವರ್ಷದಿಂದ ಹೇಳ್ತಾ ಇದ್ದೀರಿ. ಜನತೆ ರೇಷ್ಮೆ ಬೆಳೆಯನ್ನೇ ಮರೆತುಬಿಟ್ಟಿದ್ದಾರೆ. ರೇಷ್ಮೆ ಬೆಳೆಯನ್ನೇ ಬೆಳೆಯದಿರುವಾಗ ಮಾರುಕಟ್ಟೆ ಇಟ್ಟುಕೊಂಡು ಏನು ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…