ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್ ಕಟ್ ಅಂಡ್ ಪೇಸ್ಟ್ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ರಾಹುಕಾಲ ಅಂತ ಮೂರು ನಿಮಿಷ ಮುಂಚಿತವಾಗಿ ಆರಂಭಿಸಿದ್ದರು. ವರ್ಷದಿಂದ ವರ್ಷಕ್ಕೆ ಪುಸ್ತಕದ ಬಜೆಟ್ ಪ್ರತಿ ದಪ್ಪವಾಗುತ್ತಿದೆ. ಆದರೆ ಬಜೆಟ್ನಲ್ಲಿ ಹೇಳುವುದು ಒಂದು, ಮಾಡೋದು ಇನ್ನೊಂದು. ೩.೭೦ ಲಕ್ಷ ಕೋಟಿಯಲ್ಲಿ ಇದುವರೆಗೂ ಯಾವ ಅಭಿವೃದ್ಧಿ ಆಯಿತು ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಖಜಾನೆಯಲ್ಲಿ ಸ್ವಲ್ಪವೂ ದುಡ್ಡಿಲ್ಲ. ಈ ಹಿನ್ನೆಲೆಯಲ್ಲಿ ನೀವು ಯಾರನ್ನೂ ಮೂರ್ಖರನ್ನಾಗಿ ಮಾಡಲು ಹೊರಟಿದ್ದೀರಾ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಹದಿನಾರು ಬಜೆಟ್ ಮಂಡಿಸಿದ್ದಾರೆಯೇ ಹೊರತು ಯಾವ ಬದಲಾವಣೆ ಹಾಗೂ ಸುಧಾರಣೆ ತಂದಿಲ್ಲ. ಇದೊಂದು ಕಟ್ ಅಂಡ್ ಪೇಸ್ಟ್ ಆಗಿದೆ ಎಂದು ಬಜೆಟ್ ವಿರುದ್ಧ ಕಿಡಿಕಾರಿದರು.
ಇನ್ನು ಬಜೆಟ್ನಲ್ಲಿ ನೀವು ಮೈಸೂರಿಗೆ ಏನು ಕೊಟ್ಟಿದ್ದೀರಿ. ಹಳೆಯದನ್ನೇ ಹೇಳ್ತಾ ಇದ್ದೀರಿ. ಈಗಾಗಲೇ ನಿಮ್ಹಾನ್ಸ್ ಕೆಲಸ ಶುರುವಾಗಿದೆ. ಚಿತ್ರನಗರಿ ಎಂದು ಎಷ್ಟು ವರ್ಷದಿಂದ ಹೇಳ್ತಾ ಇದ್ದೀರಿ. ಜನತೆ ರೇಷ್ಮೆ ಬೆಳೆಯನ್ನೇ ಮರೆತುಬಿಟ್ಟಿದ್ದಾರೆ. ರೇಷ್ಮೆ ಬೆಳೆಯನ್ನೇ ಬೆಳೆಯದಿರುವಾಗ ಮಾರುಕಟ್ಟೆ ಇಟ್ಟುಕೊಂಡು ಏನು ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…