ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್ ಕಟ್ ಅಂಡ್ ಪೇಸ್ಟ್ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.
ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ರಾಹುಕಾಲ ಅಂತ ಮೂರು ನಿಮಿಷ ಮುಂಚಿತವಾಗಿ ಆರಂಭಿಸಿದ್ದರು. ವರ್ಷದಿಂದ ವರ್ಷಕ್ಕೆ ಪುಸ್ತಕದ ಬಜೆಟ್ ಪ್ರತಿ ದಪ್ಪವಾಗುತ್ತಿದೆ. ಆದರೆ ಬಜೆಟ್ನಲ್ಲಿ ಹೇಳುವುದು ಒಂದು, ಮಾಡೋದು ಇನ್ನೊಂದು. ೩.೭೦ ಲಕ್ಷ ಕೋಟಿಯಲ್ಲಿ ಇದುವರೆಗೂ ಯಾವ ಅಭಿವೃದ್ಧಿ ಆಯಿತು ಎಂದು ಪ್ರಶ್ನೆ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯ ಖಜಾನೆಯಲ್ಲಿ ಸ್ವಲ್ಪವೂ ದುಡ್ಡಿಲ್ಲ. ಈ ಹಿನ್ನೆಲೆಯಲ್ಲಿ ನೀವು ಯಾರನ್ನೂ ಮೂರ್ಖರನ್ನಾಗಿ ಮಾಡಲು ಹೊರಟಿದ್ದೀರಾ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಹದಿನಾರು ಬಜೆಟ್ ಮಂಡಿಸಿದ್ದಾರೆಯೇ ಹೊರತು ಯಾವ ಬದಲಾವಣೆ ಹಾಗೂ ಸುಧಾರಣೆ ತಂದಿಲ್ಲ. ಇದೊಂದು ಕಟ್ ಅಂಡ್ ಪೇಸ್ಟ್ ಆಗಿದೆ ಎಂದು ಬಜೆಟ್ ವಿರುದ್ಧ ಕಿಡಿಕಾರಿದರು.
ಇನ್ನು ಬಜೆಟ್ನಲ್ಲಿ ನೀವು ಮೈಸೂರಿಗೆ ಏನು ಕೊಟ್ಟಿದ್ದೀರಿ. ಹಳೆಯದನ್ನೇ ಹೇಳ್ತಾ ಇದ್ದೀರಿ. ಈಗಾಗಲೇ ನಿಮ್ಹಾನ್ಸ್ ಕೆಲಸ ಶುರುವಾಗಿದೆ. ಚಿತ್ರನಗರಿ ಎಂದು ಎಷ್ಟು ವರ್ಷದಿಂದ ಹೇಳ್ತಾ ಇದ್ದೀರಿ. ಜನತೆ ರೇಷ್ಮೆ ಬೆಳೆಯನ್ನೇ ಮರೆತುಬಿಟ್ಟಿದ್ದಾರೆ. ರೇಷ್ಮೆ ಬೆಳೆಯನ್ನೇ ಬೆಳೆಯದಿರುವಾಗ ಮಾರುಕಟ್ಟೆ ಇಟ್ಟುಕೊಂಡು ಏನು ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…