ಮೈಸೂರು ನಗರ

ರಾಜ್ಯ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಇದೇ ಮಾರ್ಚ್.‌7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಜೆಟ್‌ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. WTO ಒಪ್ಪಂದ ಜಾರಿಗೆ ಬಂದ ನಂತರ ರೈತರ ಜೀವನ ಚಿಂತಾಜನಕವಾಗಿದೆ. ಈ ಬಜೆಟ್‌ನಲ್ಲಿ ಗ್ರಾಮೀಣ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮೈಕ್ರೋ ಫೈನಾನ್ಸ್ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಲು ಸರ್ಕಾರದ ಅಧೀನ ಸಂಸ್ಥೆ ಮೂಲಕ ಸಾಲ ಸೌಲಭ್ಯ ಒದಗಿಸಬೇಕು. ಕಾವೇರಿ ಅಂತಿಮ ತೀರ್ಪಿನಂತೆ ಹೆಚ್ಚುವರಿ ನದಿ ನೀರಿನ ಬಳಕೆಗೆ ಯೋಜನೆ ರೂಪಿಸಿ, ಕೃಷ್ಣ ಬಿ ಸ್ಕೀಂ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಜೆಟ್‌ನಲ್ಲಿ ಸಣ್ಣ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿ ಕೃಷಿ ಬಲವರ್ಧನೆ ಮಾಡಬೇಕು. ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿರುವ ರೈತ ಬಜೆಟ್ ಹಕ್ಕು ಮಂಡನೆ ಕಿರುಹೊತ್ತಿಗೆಯ ವಿಚಾರವನ್ನು ಬಜೆಟ್‌ನಲ್ಲಿ ಅಳವಡಿಸಬೇಕು ಎಂದು ಆಗ್ರಹಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

26 seconds ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

13 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago