ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿಯೇ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ, ಇದನ್ನು ತಡೆಗಟ್ಟಲು ಬಜೆಟ್ನಲ್ಲಿ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ಘೋಷಿಸಿಲ್ಲ ಎಂದು ಅವರು ಟೀಕಿಸಿದ್ದಾರೆ.
ಕೃಷಿ ಕ್ಷೇತ್ರದ ಬಗ್ಗೆ ಬೇಸರಗೊಂಡು ರೈತರ ಮಕ್ಕಳು ನಗರಗಳತ್ತ ವಲಸೆ ಹೋಗುತ್ತಿರುವುದು ಮತ್ತು ಮದುವೆಯಾಗಲು ಹೆಣ್ಣು ಸಿಗದಿರುವುದು ಗ್ರಾಮೀಣ ಭಾಗದ ಭೀಕರ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸದಿದ್ದರೆ ಕೃಷಿ ಕ್ಷೇತ್ರ ಮತ್ತಷ್ಟು ದುರ್ಬಲಗೊಳ್ಳಲಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದಾರೆ.
ಬಜೆಟ್ನಲ್ಲಿ ಘೋಷಿಸಲಾಗಿರುವ ಶೂನ್ಯ ಬಡ್ಡಿ ದರದ ಸಾಲದ ಯೋಜನೆಯು ಹಳೆಯದಾಗಿದ್ದು, ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ತೋಟಗಾರಿಕೆ ಉತ್ಪನ್ನಗಳ ದಾಸ್ತಾನಿಗಾಗಿ ದಾವಣಗೆರೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೀತಲೀಕರಣ ಘಟಕಗಳ ಸ್ಥಾಪನೆ, ಹಸು ಮತ್ತು ಎಮ್ಮೆಗಳ ಖರೀದಿಗೆ ಶೇಕಡಾ 25 ರಷ್ಟು ಪ್ರೋತ್ಸಾಹಧನ ನೀಡಿರುವುದು ಹಾಗೂ ರೇಷ್ಮೆ ಗೂಡು ಸಾಗಾಣಿಕೆ ವೆಚ್ಚವನ್ನು 20 ರೂಪಾಯಿಗಳಿಗೆ ಏರಿಸಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದ್ದಾರೆ.
ಕೃಷಿ ಕ್ಷೇತ್ರದಲ್ಲಿ ಎಐ (AI) ತಂತ್ರಜ್ಞಾನದ ಬಳಕೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿರುವುದು ಉತ್ತಮ ಚಿಂತನೆಯಾಗಿದೆ. ಅದೇ ರೀತಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸಿರುವ ಸರ್ಕಾರದ ನಿರ್ಧಾರ ಮತ್ತು ಮೈಸೂರಿನ ಜಯದೇವ ಆಸ್ಪತ್ರೆಯ ಉನ್ನತೀಕರಣಕ್ಕಾಗಿ 180 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಜನಪರವಾದ ನಿರ್ಧಾರಗಳಾಗಿವೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…