ಮೈಸೂರು: ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ಕರ್ನಾಟಕದ ಮೂಲ ಸೌಕರ್ಯ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿನ್ನಡೆ ಅನುಭವಿಸುತ್ತಿರುವ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ ಬಿಜಯ್ ಕುಮಾರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಪ್ರಥಮವಾಗಿ ರಾಜ್ಯದ ದಲಿತ ಸಮಾಜ ಕಲ್ಯಾಣಕ್ಕಾಗಿ 42,000 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ 45,286 ಕೋಟಿ, ಸಮಗ್ರ ಗ್ರಾಮೀಣ ಅಭಿವೃದ್ಧಿಗೆ 26,735 ಕೋಟಿ, ಕೃಷಿ ವಲಯದ ಮಹತ್ವದ ಉತ್ತೇಜನಕ್ಕೆ ರೂ.7,145 ಕೋಟಿ, ರಾಜ್ಯದ ನೀರಾವರಿ 22,181 ಕೋಟಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉನ್ನತೀಕರಣಕ್ಕೆ 34, 955 ಕೋಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಪ್ರಾಮುಖ್ಯತೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ನಿರಂತರ ಟೀಕೆ ಮಾಡುತ್ತಿದ್ದ ರಾಜ್ಯದ ಹಾಗೂ ದೇಶದ ಬಿಜೆಪಿ ನಾಯಕರಿಗೆ ಈ ಬಜೆಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ ಎಂದರು.
ಹಾಗೆಯೇ, ತನ್ನ ತವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ನೂತನ ಯೋಜನೆಗಳನ್ನು ನೀಡುವ ಮೂಲಕ ತನ್ನ ತಾಯಿ ನೆಲದ ಋಣ ತೀರಿಸಿ ನಂಬಿಕಸ್ಥ ರಾಜಕಾರಣದ ರುಜುವಾತು ಸಾಕ್ಷಿಕರಿಸಿದ್ದಾರೆ ಎಂದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…