ಮೈಸೂರು: ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ಕರ್ನಾಟಕದ ಮೂಲ ಸೌಕರ್ಯ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿನ್ನಡೆ ಅನುಭವಿಸುತ್ತಿರುವ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ ಬಿಜಯ್ ಕುಮಾರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಪ್ರಥಮವಾಗಿ ರಾಜ್ಯದ ದಲಿತ ಸಮಾಜ ಕಲ್ಯಾಣಕ್ಕಾಗಿ 42,000 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ 45,286 ಕೋಟಿ, ಸಮಗ್ರ ಗ್ರಾಮೀಣ ಅಭಿವೃದ್ಧಿಗೆ 26,735 ಕೋಟಿ, ಕೃಷಿ ವಲಯದ ಮಹತ್ವದ ಉತ್ತೇಜನಕ್ಕೆ ರೂ.7,145 ಕೋಟಿ, ರಾಜ್ಯದ ನೀರಾವರಿ 22,181 ಕೋಟಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉನ್ನತೀಕರಣಕ್ಕೆ 34, 955 ಕೋಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಪ್ರಾಮುಖ್ಯತೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ನಿರಂತರ ಟೀಕೆ ಮಾಡುತ್ತಿದ್ದ ರಾಜ್ಯದ ಹಾಗೂ ದೇಶದ ಬಿಜೆಪಿ ನಾಯಕರಿಗೆ ಈ ಬಜೆಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ ಎಂದರು.
ಹಾಗೆಯೇ, ತನ್ನ ತವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ನೂತನ ಯೋಜನೆಗಳನ್ನು ನೀಡುವ ಮೂಲಕ ತನ್ನ ತಾಯಿ ನೆಲದ ಋಣ ತೀರಿಸಿ ನಂಬಿಕಸ್ಥ ರಾಜಕಾರಣದ ರುಜುವಾತು ಸಾಕ್ಷಿಕರಿಸಿದ್ದಾರೆ ಎಂದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…