ಮೈಸೂರು: ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಆಶಯಗಳಿಗೆ ಅನುಗುಣವಾಗಿ ಕರ್ನಾಟಕದ ಮೂಲ ಸೌಕರ್ಯ ಹಾಗೂ ಆರ್ಥಿಕ, ಸಾಮಾಜಿಕವಾಗಿ ಹಿನ್ನಡೆ ಅನುಭವಿಸುತ್ತಿರುವ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಮಂಡಿಸಿದ್ದಾರೆ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ ಬಿಜಯ್ ಕುಮಾರ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಪ್ರಥಮವಾಗಿ ರಾಜ್ಯದ ದಲಿತ ಸಮಾಜ ಕಲ್ಯಾಣಕ್ಕಾಗಿ 42,000 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ 45,286 ಕೋಟಿ, ಸಮಗ್ರ ಗ್ರಾಮೀಣ ಅಭಿವೃದ್ಧಿಗೆ 26,735 ಕೋಟಿ, ಕೃಷಿ ವಲಯದ ಮಹತ್ವದ ಉತ್ತೇಜನಕ್ಕೆ ರೂ.7,145 ಕೋಟಿ, ರಾಜ್ಯದ ನೀರಾವರಿ 22,181 ಕೋಟಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉನ್ನತೀಕರಣಕ್ಕೆ 34, 955 ಕೋಟಿ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಪ್ರಾಮುಖ್ಯತೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ನಿರಂತರ ಟೀಕೆ ಮಾಡುತ್ತಿದ್ದ ರಾಜ್ಯದ ಹಾಗೂ ದೇಶದ ಬಿಜೆಪಿ ನಾಯಕರಿಗೆ ಈ ಬಜೆಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ನೀಡಿದ್ದಾರೆ ಎಂದರು.
ಹಾಗೆಯೇ, ತನ್ನ ತವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಹಲವಾರು ನೂತನ ಯೋಜನೆಗಳನ್ನು ನೀಡುವ ಮೂಲಕ ತನ್ನ ತಾಯಿ ನೆಲದ ಋಣ ತೀರಿಸಿ ನಂಬಿಕಸ್ಥ ರಾಜಕಾರಣದ ರುಜುವಾತು ಸಾಕ್ಷಿಕರಿಸಿದ್ದಾರೆ ಎಂದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…