ಮೈಸೂರು : ರೈತರ ಕಲ್ಯಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ ರೋಗಕ್ಕೂ ಶನೇಶ್ವರನೇ ಕಾರಣ ಎನ್ನುವಂತೆ ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತಂತ್ರಗಾರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಭಾರತಕ್ಕೆ ವೈಟ್ವಾಶ್ ಮುಖಭಂಗ : 2 ದಶಕಗಳ ಬಳಿಕ ಸರಣಿ ಗೆದ್ದ ದ.ಆಫ್ರಿಕಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿಯನ್ನು ಆದ್ಯತಾ ವಲಯವಾಗಿ ಪರಿಗಣಿಸಿದೆ. ಆ ನಿಟ್ಟಿನಲ್ಲಿ ಹಣಕಾಸು ಸಚಿವರು ಬಜೆಟ್ನಲ್ಲಿ ಕೃಷಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿದ್ದನ್ನು ಗಮನಿಸಬಹುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದರು.
ಕೃಷಿ ರಾಜ್ಯ ವಿಷಯ : ಕೃಷಿ ರಾಜ್ಯ ವಿಷಯವಾಗಿದ್ದು, ರೈತರನ್ನು ರಕ್ಷಿಸಬೇಕಾದ ಹೊಣೆ ರಾಜ್ಯಸರ್ಕಾರಕ್ಕೆ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಕೃಷಿ ಅಭಿವೃದ್ಧಿಗೆ ಗಮನವನ್ನೇ ಕೊಡುತ್ತಿಲ್ಲ.ಅತಿವೃಷ್ಟಿಯಿಂದಾಗಿ ಏಕದಳ, ದ್ವಿದಳ, ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಕೇಂದ್ರ ಸರ್ಕಾರ ಎನ್ಡಿಆರ್ಎಫ್ ನಿಯಮಗಳ ಅನುಸಾರವಾಗಿ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಸರಿಯಾಗಿ ಸಮೀಕ್ಷೆ ನಡೆಸಿ ವರದಿ ಕಳುಹಿಸಿಲ್ಲ. ಜತೆಗೆ ಎಸ್ಡಿಆರ್ಎಫ್ ಅಡಿಯಲ್ಲಿ ನೀಡಬೇಕಿರುವ ಪರಿಹಾರವನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ರಾಜ್ಯಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ಕಿರಣ್ ಜಯರಾಮೇಗೌಡ, ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಚ್.ಜಿ.ಗಿರಿಧರ್, ಸಂತೋಷ್ ಕುಮಾರ್ ಹಾಜರಿದ್ದರು.
ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ…
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ…
ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ…
ಬೆಳಗಾವಿ : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ…
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…