ಮೈಸೂರು : ರೈತರ ಕಲ್ಯಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ ರೋಗಕ್ಕೂ ಶನೇಶ್ವರನೇ ಕಾರಣ ಎನ್ನುವಂತೆ ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತಂತ್ರಗಾರಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಭಾರತಕ್ಕೆ ವೈಟ್ವಾಶ್ ಮುಖಭಂಗ : 2 ದಶಕಗಳ ಬಳಿಕ ಸರಣಿ ಗೆದ್ದ ದ.ಆಫ್ರಿಕಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿಯನ್ನು ಆದ್ಯತಾ ವಲಯವಾಗಿ ಪರಿಗಣಿಸಿದೆ. ಆ ನಿಟ್ಟಿನಲ್ಲಿ ಹಣಕಾಸು ಸಚಿವರು ಬಜೆಟ್ನಲ್ಲಿ ಕೃಷಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿದ್ದನ್ನು ಗಮನಿಸಬಹುದು. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ ಎಂದರು.
ಕೃಷಿ ರಾಜ್ಯ ವಿಷಯ : ಕೃಷಿ ರಾಜ್ಯ ವಿಷಯವಾಗಿದ್ದು, ರೈತರನ್ನು ರಕ್ಷಿಸಬೇಕಾದ ಹೊಣೆ ರಾಜ್ಯಸರ್ಕಾರಕ್ಕೆ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಕೃಷಿ ಅಭಿವೃದ್ಧಿಗೆ ಗಮನವನ್ನೇ ಕೊಡುತ್ತಿಲ್ಲ.ಅತಿವೃಷ್ಟಿಯಿಂದಾಗಿ ಏಕದಳ, ದ್ವಿದಳ, ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಕೇಂದ್ರ ಸರ್ಕಾರ ಎನ್ಡಿಆರ್ಎಫ್ ನಿಯಮಗಳ ಅನುಸಾರವಾಗಿ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಸರಿಯಾಗಿ ಸಮೀಕ್ಷೆ ನಡೆಸಿ ವರದಿ ಕಳುಹಿಸಿಲ್ಲ. ಜತೆಗೆ ಎಸ್ಡಿಆರ್ಎಫ್ ಅಡಿಯಲ್ಲಿ ನೀಡಬೇಕಿರುವ ಪರಿಹಾರವನ್ನೂ ಕೊಟ್ಟಿಲ್ಲ ಎಂದು ಟೀಕಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ರಾಜ್ಯಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡಾ.ಅನಿಲ್ ಥಾಮಸ್, ಕಿರಣ್ ಜಯರಾಮೇಗೌಡ, ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಚ್.ಜಿ.ಗಿರಿಧರ್, ಸಂತೋಷ್ ಕುಮಾರ್ ಹಾಜರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…