ಮೈಸೂರು ನಗರ

ರಾಜ್ಯ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ: ಹಿರಿಯ ವಕೀಲ ಅರುಣ್ ಕುಮಾರ್

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ ಎಂದು ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಹಾಗೂ ಹಿರಿಯ ವಕೀಲ ಅರುಣ್ ಕುಮಾರ್ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿ ಮುಂಬರುವ ಆಗಸ್ಟ್.1ಕ್ಕೆ ಒಂದು ವರ್ಷವಾಗಲಿದೆ. ಆದರು ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿಲ್ಲ. ಒಳಮೀಸಲಾತಿ ಜಾರಿ ಮಾಡದೇ ಕೇವಲ ಓಟ್ ಬ್ಯಾಂಕ್‌ಗಾಗಿ ಪರಿಶಿಷ್ಟ ಸಮುದಾಯದ ಓಲೈಕೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಜಸ್ಟೀಸ್ ನಾಗಮೋಹನದಾಸ್ ಆಯೋಗ ಹಾಗೂ ರಾಜ್ಯ ಸರ್ಕಾರ ಮಾದಿಗ ಸಮುದಾಯದ ವಿರೋಧಿಗಳೆಂಬುದು ಸ್ಪಷ್ಟವಾಗಿದೆ. ಮಾದಿಗ ಸಮುದಾಯ ಪರಿಶಿಷ್ಟ ಸಮುದಾಯದಲ್ಲೇ ಅತಿ ಹೆಚ್ಚು ತುಳಿತಕ್ಕೆ ಒಳಗಾದ ಸಮುದಾಯವಾಗಿದೆ. ಆದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ.

ಒಳಮೀಸಲಾತಿ ಜಾರಿಗಾಗಿ ಸಮೀಕ್ಷೆ ಮಾಡಲು ನೇಮಿಸಿರುವ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಪದೇ ಪದೇ ದಿನಾಂಕವನ್ನು ವಿಸ್ತರಿಸುತ್ತಿದೆ. ನಾಗಮೋಹನ್ ದಾಸ್ ಸಮಿತಿ ಆಗಸ್ಟ್.1ರೊಳಗೆ ವರದಿ ನೀಡದಿದ್ದರೇ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಒಳಮೀಸಲಾತಿ ಹೋರಾಟ ಸಮಿತಿಯ ಭಾಸ್ಕರ್ ಪ್ರಸಾದ್ ಮಾತನಾಡಿ ಒಳಮೀಸಲಾತಿ ಜಾರಿಗೆ ತ್ವರಿತ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಹಿಂದೇಟು ಹಾಕುವುದನ್ನು ಮುಂದುವರಿಸಿದರೆ ಹೋರಾಟ ಅನಿವಾರ್ಯ. ಮಾದಿಗ ಸಮುದಾಯದ ಹೋರಾಟದ ಬಗ್ಗೆ ಮಾತನಾಡಲು ಸಚಿವ ಕೆ.ಹೆಚ್.ಮುನಿಯಪ್ಪಗೆ ಯಾವುದೇ ನೈತಿಕತೆ ಇಲ್ಲ.

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಬರುವ ಆಗಸ್ಟ್.1ರಿಂದ ರಾಜ್ಯದಾದ್ಯಂತ ಪಕ್ಷಾತೀತವಾಗಿ ಹೋರಾಟ ಆರಂಭಿಸುತ್ತೇವೆ. ಹಾಗಾಗಿ ಜುಲೈ.31ರೊಳಗೆ ನಾಗಮೋಹನ್ ದಾಸ್ ಸಮಿತಿ ನೀಡುವ ವರದಿ ಸ್ವೀಕರಿಸಿ, ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಆಗಸ್ಟ್.1ರಂದು ರಾಜ್ಯ ಸರ್ಕಾರದ ಶವಯಾತ್ರೆ ಮಾಡುತ್ತೇವೆ. ತಲೆ ಬೋಳಿಸಿಕೊಂಡು ತಲೆಕೂದಲನ್ನು ಸರ್ಕಾರಕ್ಕೆ ರವಾನಿಸುತ್ತೇವೆ. ಏಕೆಂದರೆ ಈ ರಾಜ್ಯ ಸರ್ಕಾರ ಸತ್ತುಹೋಗಿದೆ ಎಂದು ಹರಿಹಾಯ್ದರು.

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

1 hour ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

3 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

4 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

4 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

4 hours ago