Mysore
25
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ರಾಜ್ಯ ಸರ್ಕಾರ ಹಿಂದೂ ಧರ್ಮ ಒಡೆಯುವ ಕೆಲಸಕ್ಕೆ ಮುಂದಾಗಿದೆ: ರಘು ಕೌಟಿಲ್ಯ ಆರೋಪ

raghu kautilya

ಮೈಸೂರು: ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕಾರ್ಯಕ್ಕೆ ಮುಂದಾಗಿದೆ ಎಂದು ಬಿಜೆಪಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಆರ್.ರಘು ಕೌಟಿಲ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಅರಮನೆಗಿಂತ ಹೆಚ್ಚು ಅರಳಿಮರದಡಿ ಜೀವಿಸುವ ಧಮ್ಮ

ಈ ಕುರಿತು ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಾತಿ ಗಣತಿ ನಡೆಸಲು ಅಗತ್ಯ ಪ್ರಕಟಣೆ ಹೊರಡಿಸಿದೆ. 1400 ಜಾತಿಗಳ ಸಮೀಕ್ಷೆ ಮಾಡಲು ಮುಂದಾಗಿದೆ. ಅದರಲ್ಲಿ 50ಕ್ಕೂ ಹೆಚ್ಚು ಜಾತಿಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಲಿಂಗಾಯತ ಕ್ರೈಸ್ತ, ಒಕ್ಕಲಿಗ ಕ್ರೈಸ್ತ, ಕುರುಬ ಕ್ರೈಸ್ತ, ನೇಕಾರ ಕ್ರೈಸ್ತ, ಮಡಿವಾಳ ಕ್ರೈಸ್ತ, ಬಿಲ್ಲವ ಕ್ರೈಸ್ತ, ಕುಂಬಾರ ಕ್ರೈಸ್ತ, ಮಾದಿಗ ಕ್ರೈಸ್ತ ,ಬಂಜಾರ ಕ್ರೈಸ್ತ ಹೀಗೆ ಹೊಸ ಜಾತಿಗಳನ್ನು ಹುಟ್ಟು ಹಾಕುವ ಮುಖಾಂತರ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲು ಮುಂದಾಗಿದೆ. ಕ್ರೈಸ್ತ ಹೆಸರಿನಲ್ಲಿ ಮತಾಂತರ ಮಾಡಿ ಜಾತಿಗಳನ್ನು ಹೊಡೆಯುವ ಕಾರ್ಯಕ್ಕೆ ಮುಂದಾಗಿದೆ. ಸಾಮಾಜಿಕ ಜಾತಿಗಳ ಸಮೀಕ್ಷೆಯಲ್ಲಿ ಮತಾಂತರ ಭಾಗ್ಯವನ್ನು ರಾಜ್ಯ ಸರ್ಕಾರ ನೀಡಲು ಮುಂದಾಗಿದೆ. ಕೂಡಲೇ ಹಿಂದುಳಿದ ವರ್ಗಗಳ ಆಯೋಗ ಸೇರಿಸಿರುವ ನೂತನ ಜಾತಿಗಳನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!